12:59 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಸಿಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ: ಪ್ರಧಾನಿ ಸ್ವಾಗತಕ್ಕೆ ಸಿದ್ಧತೆ

22/01/2023, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ತಿಂಗಳಿನ 21ರಿಂದ ಆರಂಭಗೊಂಡ 9 ದಿನಗಳ ಕಾಲದ ವಿಜಯ ಸಂಕಲ್ಪ ಯಾತ್ರೆಗೆ ಅಥಣಿ ತಾಲೂಕಿನ ಶೇಗುಣಸಿಯಲ್ಲಿ ಚಾಲನೆ ನೀಡಲಾಯಿತು.

ಪ್ರತಿ ಮನೆ ಮನೆಗೆ ಕರಪತ್ರ ಕೊಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆ ಹಾಗೂ ಅಭಿವೃದ್ದಿ ಕಾರ್ಯಗಳ ಮಾಹಿತಿ ಕೊಡಲಾಗಿದೆ, ಸ್ಟಿಕರ್ ಪ್ರತಿ ಮನೆ ಮನೆಗೆ ಹಚ್ಚಿ ಬಿಜೆಪಿ ಅಭಿಯಾನ ಉಂಟು ಮಾಡಬೇಕು, ಗೋಡೆ ಬರಹ ಬರೆಯಬೇಕು, ಪ್ರತಿ ಬೂತ್ ಮಟ್ಟದಲ್ಲಿ ಕನಿಷ್ಠ 10 ಗೋಡೆ ಬರಹ ಬರೆಯಬೇಕು, 29 ರಂದು ಪ್ರಧಾನಿಯವರ ಮನ್ ಕಿ ಬಾತ್ ಕಾರ್ಯಕ್ರಮವಿದೆ ಆ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡುವಂತೆ ಪ್ರೇರೆಪಿಸಲಾಗುವುದು ಎಂದು ಬಿಜೆಪಿ ಅಥಣಿ ಮಂಡಳ ವಿಸ್ತಾರಕ ಅರ್ಜುನ ಪವಾರ ಅವರು ಹೇಳಿದ್ದಾರೆ.
ಅವರು ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಅನಂತರ ಶಾಸಕ ಮಹೇಶ ಕುಮಠಳ್ಳಿ ಅವರು ಮಾತನಾಡುತ್ತಾ ಬರುವ 29 ರ ಪ್ರಧಾನಿಯವ ಕಾರ್ಯಕ್ರಮ ವೀಕ್ಷಿಸಿ , ಜೊತೆಗೆ ಬಿಜೆಪಿಯ ಕಾರ್ಯಸಾಧನೆಗಳನ್ನು ಪ್ರತಿಯೋರ್ವ ಜನರಿಗೆ ತಿಳಿಸಿಕೊಡುವ ಕಾರ್ಯ ಎಲ್ಲ ಕಾರ್ಯಕರ್ತರು ನಡೆಸಿಕೊಡಬೇಕು. ಈ ಮೂಲಕ ದೇಶವನ್ನು ಸುಬಧ್ರವಾಗಿ ಕಟ್ಟಿಕೊಡುವುದನ್ನು ಕಾರ್ಯಕರ್ತರು ಮಾಡಬೇಕು, 2023 ರ ಚುನಾವಣೆಯ ಪೂರ್ವಭಾವಿಯಾಗಿ ಹಲವಾರು ಯೋಜಮೆ ಹಾಕಿಕೊಂಡಿದ್ದು ಅವೆಲ್ಲವುಗಳ ಮಾಹಿತಿ ಜನರಿಗೆ ಮುಟ್ಟಿಸುವುದಾಗಿದೆ ಎಂದರು.

ಈ ವೇಳೆ ನಿಂಗಪ್ಪ ನಂದೇಶ್ವರ, ಕಲ್ಮೇಶ ಯಲಡಗಿ, ಶಿವಪುತ್ರ ನಾಯಿಕ, ರಾಜು‌ ಮರಡಿ, ಬಸವರಾಜ ಮಗದುಮ್, ವಿವೇಕ ನಾರಗೊಂಡ, ಕುಮಾರ ಸತ್ತಿಗೌಡರ, ಲಕ್ಷ್ಮಣ ಆಲೂರ, ಅಶೋಕ ಅಮ್ಮಣಗಿ, ವೆಂಕಟೇಶ ದೇಶಪಾಂಡೆ ಸೇರಿದಂತೆ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು