11:15 PM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಸಿಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ: ಪ್ರಧಾನಿ ಸ್ವಾಗತಕ್ಕೆ ಸಿದ್ಧತೆ

22/01/2023, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ತಿಂಗಳಿನ 21ರಿಂದ ಆರಂಭಗೊಂಡ 9 ದಿನಗಳ ಕಾಲದ ವಿಜಯ ಸಂಕಲ್ಪ ಯಾತ್ರೆಗೆ ಅಥಣಿ ತಾಲೂಕಿನ ಶೇಗುಣಸಿಯಲ್ಲಿ ಚಾಲನೆ ನೀಡಲಾಯಿತು.

ಪ್ರತಿ ಮನೆ ಮನೆಗೆ ಕರಪತ್ರ ಕೊಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆ ಹಾಗೂ ಅಭಿವೃದ್ದಿ ಕಾರ್ಯಗಳ ಮಾಹಿತಿ ಕೊಡಲಾಗಿದೆ, ಸ್ಟಿಕರ್ ಪ್ರತಿ ಮನೆ ಮನೆಗೆ ಹಚ್ಚಿ ಬಿಜೆಪಿ ಅಭಿಯಾನ ಉಂಟು ಮಾಡಬೇಕು, ಗೋಡೆ ಬರಹ ಬರೆಯಬೇಕು, ಪ್ರತಿ ಬೂತ್ ಮಟ್ಟದಲ್ಲಿ ಕನಿಷ್ಠ 10 ಗೋಡೆ ಬರಹ ಬರೆಯಬೇಕು, 29 ರಂದು ಪ್ರಧಾನಿಯವರ ಮನ್ ಕಿ ಬಾತ್ ಕಾರ್ಯಕ್ರಮವಿದೆ ಆ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡುವಂತೆ ಪ್ರೇರೆಪಿಸಲಾಗುವುದು ಎಂದು ಬಿಜೆಪಿ ಅಥಣಿ ಮಂಡಳ ವಿಸ್ತಾರಕ ಅರ್ಜುನ ಪವಾರ ಅವರು ಹೇಳಿದ್ದಾರೆ.
ಅವರು ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಅನಂತರ ಶಾಸಕ ಮಹೇಶ ಕುಮಠಳ್ಳಿ ಅವರು ಮಾತನಾಡುತ್ತಾ ಬರುವ 29 ರ ಪ್ರಧಾನಿಯವ ಕಾರ್ಯಕ್ರಮ ವೀಕ್ಷಿಸಿ , ಜೊತೆಗೆ ಬಿಜೆಪಿಯ ಕಾರ್ಯಸಾಧನೆಗಳನ್ನು ಪ್ರತಿಯೋರ್ವ ಜನರಿಗೆ ತಿಳಿಸಿಕೊಡುವ ಕಾರ್ಯ ಎಲ್ಲ ಕಾರ್ಯಕರ್ತರು ನಡೆಸಿಕೊಡಬೇಕು. ಈ ಮೂಲಕ ದೇಶವನ್ನು ಸುಬಧ್ರವಾಗಿ ಕಟ್ಟಿಕೊಡುವುದನ್ನು ಕಾರ್ಯಕರ್ತರು ಮಾಡಬೇಕು, 2023 ರ ಚುನಾವಣೆಯ ಪೂರ್ವಭಾವಿಯಾಗಿ ಹಲವಾರು ಯೋಜಮೆ ಹಾಕಿಕೊಂಡಿದ್ದು ಅವೆಲ್ಲವುಗಳ ಮಾಹಿತಿ ಜನರಿಗೆ ಮುಟ್ಟಿಸುವುದಾಗಿದೆ ಎಂದರು.

ಈ ವೇಳೆ ನಿಂಗಪ್ಪ ನಂದೇಶ್ವರ, ಕಲ್ಮೇಶ ಯಲಡಗಿ, ಶಿವಪುತ್ರ ನಾಯಿಕ, ರಾಜು‌ ಮರಡಿ, ಬಸವರಾಜ ಮಗದುಮ್, ವಿವೇಕ ನಾರಗೊಂಡ, ಕುಮಾರ ಸತ್ತಿಗೌಡರ, ಲಕ್ಷ್ಮಣ ಆಲೂರ, ಅಶೋಕ ಅಮ್ಮಣಗಿ, ವೆಂಕಟೇಶ ದೇಶಪಾಂಡೆ ಸೇರಿದಂತೆ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು