3:28 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಅಪಘಾತ ಸಂಭವಿಸಿದ ಕಾರಿನಲ್ಲಿ ನಾನು ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸ್ಪಷ್ಟನೆ

06/07/2021, 20:13

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರ ಕಾರು ಅಪಘಾತ ಸಂಭವಿಸಿದ್ದು, ತಾನು ಆ ಕಾರಿನಲ್ಲಿ ಇರಲಿಲ್ಲ ಎಂದು ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ.

ಅಥಣಿ ಪಟ್ಟಣದ  ಸ್ವಗೃಹದಲ್ಲಿ ರಿಪೋರ್ಟರ್ಸ್ ಕರ್ನಾಟಕ  ಜತೆ ಮಾತನಾಡಿದ ಅವರು, 

ನಾನು ಮತ್ತು ನಮ್ಮ ಸ್ನೇಹಿತರು ಅಂಜನಾದ್ರಿ ಬೆಟ್ಟದ ಹನುಮನ ದರ್ಶನಕ್ಕೆ ಹೋಗಿದ್ದೀವಿ. ಮರಳಿ ಊರಿಗೆ ಬರುವ ಸಂದರ್ಭದಲ್ಲಿ ಹುನಗುಂದ ಸಮೀಪದಲ್ಲಿ ಈ ಘಟನೆ ಸಂಭವಿಸಿದೆ. ನಾವು ಮತ್ತು ನಮ್ಮ ಸ್ನೇಹಿತರು ಎರಡು ಕಾರುಗಳಲ್ಲಿ ಹೋಗಿದ್ದು, ಹಿಂದಿನ ಕಾರಿನಿಂದ ನಮ್ಮ ಚಾಲಕ ಅಪಘಾತಕ್ಕೆ ಒಳಗಾಗಿ ನಮಗೆ ಕರೆ ಮಾಡಿದ ತಿಳಿಸಿದ. ನಾನು ತಕ್ಷಣವೇ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. 

ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಹೋರಡುತ್ತೇನೆ. ನಮ್ಮ ಕಡೆಯಿಂದ ಆದಷ್ಟು ಪರಿಹಾರ ನೀಡುತ್ತೇನೆ. ಯಾವುದೇ ರೀತಿಯ ತಮ್ಮ ತಂದೆಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ, ನಾನು ಯಾರ ಮುಂದೆಯೂ ಡಿಸಿಎಂ ಮಗನೆಂದು ಹೇಳಿಲ್ಲ ಎಂದು ಆರೋಪಕ್ಕೆ ತೆರೆ ಎಳೆದರು. 

ಸದ್ಯ ಈ ಪ್ರಕರಣ ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ ಅವರು, ಈ ಪ್ರಕರಣದ ಬಗ್ಗೆ ನಮ್ಮ ತಂದೆಯವರಾದ ಲಕ್ಷಣ ಸವದಿ ಅವರಿಗೆ ಮಾಹಿತಿ ನೀಡಿದ್ದೆನೆ ಎಂದು ಚಿದಾನಂದ ಸವದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು