10:19 PM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಮತ್ತೆ ಕಾಂಗ್ರೆಸ್ ವೇದಿಕೆಯೇರಿದ ಹಿರಿಯ ಮುತ್ಸದ್ಧಿ: ‘ಪ್ರಜಾಧ್ವನಿ’ಯಲ್ಲಿ ಸಿದ್ದರಾಮಯ್ಯ- ಪೂಜಾರಿ ಸಮಾಗಮ!

23/01/2023, 11:20

ಮಂಗಳೂರು(reporterkarnataka.com): ದಶಕಗಳ ಬಳಿಕ ಕಾಂಗ್ರಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಂಡ ಎಲ್ಲರ ಕುತೂಹಲಕ್ಕೆ ಕಾರಣರಾದರು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟು ಟೀಕೆಕಾರರಾದ ಪೂಜಾರಿ ಅವರು ಭಾನುವಾರ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡರು. ವಯೋಸಹಜ ಸಮಸ್ಯೆಗಳಿದ್ದರೂ ಪೂಜಾರಿ ಅವರು ತಾಳ್ಮೆಯಿಂದ ಎಲ್ಲ ನಾಯಕರುಗಳ ಭಾಷಣವನ್ನು ಆಲಿಸಿದರು. ಕಾಂಗ್ರೆಸ್ ನ ಭೀಷ್ಮ ಎಂದೇ ಪರಿಗಣಿಸಲ್ಪಟ್ಡ ಪೂಜಾರಿ ಅವರ ಜತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸುರ್ಜೇವಾಲ, ಡಾ.ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಘಟಾನುಘಟಿಗಳು ಗ್ರೂಪ್ ಫೋಟೋ ತೆಗೆಸಿಕೊಂಡರು.

2013ರಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರ ಕಾರ್ಯ ವೈಖರಿಯನ್ನು ಪೂಜಾರಿ ಅವರು ಕಟು ಟೀಕೆ ಮಾಡುತ್ತಿದ್ದರು.

ಅಂದು ಹಂಪನಕಟ್ಟೆಯ ಬಾಡಿಗೆ ಕಟ್ಟಡದಲ್ಲಿದ್ದ ಕಾಂಗ್ರೆಸ್ ಕಚೇರಿಯಲ್ಲಿ ಪೂಜಾರಿ ಅವರು ಪತ್ರಿಕಾಗೋಷ್ಠಿ ಕರೆದು ಕಾಂಗ್ರೆಸ್ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ನಂತರ ಅಂದಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಅವರು ಪೂಜಾರಿ ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನಿರಾಕರಿಸಿದರು. ಆ ಮೂಲಕ ತಾನೇ ಬಾಡಿಗೆ ಕಟ್ಟಿ ತೆರೆದಿದ್ದ ಕಾಂಗ್ರೆಸ್ ಕಚೇರಿಗೆ ಹೋಗುವುದನ್ನು ಪೂಜಾರಿ ಅವರು ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ನಿಷ್ಠುರವಾದಿಯಾದ ನೇರ ನಡೆ- ನುಡಿಯ ಪೂಜಾರಿ ಅವರು ನಂತರದ ದಿನಗಳಲ್ಲಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಕರೆದು ಕಾಂಗ್ರೆಸ್ ಸರಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದೀಗ ಅದೆಲ್ಲ ಇತಿಹಾಸ.

ಇತ್ತೀಚಿನ ಸುದ್ದಿ

ಜಾಹೀರಾತು