6:14 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ದೇವರ ಮನೆಗೆ ಬರುವ ಪ್ರವಾಸಿಗರಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ: ಪೊಲೀಸರಿಂದ ಎಚ್ಚರಿಕೆ

23/01/2023, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರವಾಸಿ ತಾಣ ಹಾಗೂ ಐತಿಹಾಸಿಕ ಸ್ಥಳ ದೇವರಮನೆಯಲ್ಲಿ ಕೆಲ ಪ್ರವಾಸಿಗರ ಉಪಟಳದಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ.
ಭಾನುವಾರ ದೇವರಮನೆಯಲ್ಲಿ ಕೆಲ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ್ದು ಗ್ರಾಮಸ್ಥರು ಆ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡು ಬಣಕಲ್ ಠಾಣೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಬಣಕಲ್ ಗ್ರಾಮಸ್ಥರಾದ ಬಿ.ಎಸ್ ವಿಕ್ರಂ, ದೇವರಮನೆ ಪ್ರವಾಸಿತಾಣಕ್ಕೆ ಬರುತ್ತಿರುವ ಕೆಲ ಪ್ರವಾಸಿಗರು ಮದ್ಯಪಾನ ಮತ್ತು ಮಾದಕ ವ್ಯಸನ ಮಾಡುತ್ತಿದ್ದು ದೇವರಮನೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ನಿಸರ್ಗ ರಮಣೀಯ ತಾಣ ದೇವರ ಮನೆಯಲ್ಲಿ ಮೋಜುಮಸ್ತಿಯಲ್ಲಿ ತೊಡಗುತ್ತಿದ್ದು ಇದರಿಂದ ಬಣಕಲ್ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಕೇಕೆ ಹಾಕುವುದು‌ ಮದ್ಯ ಬಾಟಲಿಗಳನ್ನು ಒಡೆದು ಹಾಕುವುದು ಮುಂತಾದ ಕೆಲಸಗಳನ್ನು‌ ಕೆಲ ಪ್ರವಾಸಿಗರು ಮಾಡುತ್ತಿದ್ದಾರೆ.

ದೇವರಮನೆಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಕಿಡಿಗೇಡಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ. ರಾತ್ರಿ ಸಮಯದಲ್ಲೂ ಕೆಲ ಪ್ರವಾಸಿಗರು ದೇವರಮನೆಗೆ ಬರುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕಿದೆ. ದೇವರಮನೆಗೆ ಸಾಗುವ ರಸ್ತೆಯುದ್ದಕ್ಕೂ ಪ್ಲಾಸ್ಟಿಕ್, ಮದ್ಯ ಬಾಟಲಿಯನ್ನು ಎಸೆಯುವುದು ನಡೆಯುತ್ತಿದೆ. ಇದರಿಂದಾಗಿ ಪರಿಸರ ಮಾಲಿನ್ಯವಾಗುತ್ತಿದ್ದು ಗ್ರಾಮಸ್ಥರಿಗೂ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು