12:17 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ದೇವರ ಮನೆಗೆ ಬರುವ ಪ್ರವಾಸಿಗರಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ: ಪೊಲೀಸರಿಂದ ಎಚ್ಚರಿಕೆ

23/01/2023, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರವಾಸಿ ತಾಣ ಹಾಗೂ ಐತಿಹಾಸಿಕ ಸ್ಥಳ ದೇವರಮನೆಯಲ್ಲಿ ಕೆಲ ಪ್ರವಾಸಿಗರ ಉಪಟಳದಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ.
ಭಾನುವಾರ ದೇವರಮನೆಯಲ್ಲಿ ಕೆಲ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ್ದು ಗ್ರಾಮಸ್ಥರು ಆ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡು ಬಣಕಲ್ ಠಾಣೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಬಣಕಲ್ ಗ್ರಾಮಸ್ಥರಾದ ಬಿ.ಎಸ್ ವಿಕ್ರಂ, ದೇವರಮನೆ ಪ್ರವಾಸಿತಾಣಕ್ಕೆ ಬರುತ್ತಿರುವ ಕೆಲ ಪ್ರವಾಸಿಗರು ಮದ್ಯಪಾನ ಮತ್ತು ಮಾದಕ ವ್ಯಸನ ಮಾಡುತ್ತಿದ್ದು ದೇವರಮನೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ನಿಸರ್ಗ ರಮಣೀಯ ತಾಣ ದೇವರ ಮನೆಯಲ್ಲಿ ಮೋಜುಮಸ್ತಿಯಲ್ಲಿ ತೊಡಗುತ್ತಿದ್ದು ಇದರಿಂದ ಬಣಕಲ್ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಕೇಕೆ ಹಾಕುವುದು‌ ಮದ್ಯ ಬಾಟಲಿಗಳನ್ನು ಒಡೆದು ಹಾಕುವುದು ಮುಂತಾದ ಕೆಲಸಗಳನ್ನು‌ ಕೆಲ ಪ್ರವಾಸಿಗರು ಮಾಡುತ್ತಿದ್ದಾರೆ.

ದೇವರಮನೆಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಕಿಡಿಗೇಡಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ. ರಾತ್ರಿ ಸಮಯದಲ್ಲೂ ಕೆಲ ಪ್ರವಾಸಿಗರು ದೇವರಮನೆಗೆ ಬರುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕಿದೆ. ದೇವರಮನೆಗೆ ಸಾಗುವ ರಸ್ತೆಯುದ್ದಕ್ಕೂ ಪ್ಲಾಸ್ಟಿಕ್, ಮದ್ಯ ಬಾಟಲಿಯನ್ನು ಎಸೆಯುವುದು ನಡೆಯುತ್ತಿದೆ. ಇದರಿಂದಾಗಿ ಪರಿಸರ ಮಾಲಿನ್ಯವಾಗುತ್ತಿದ್ದು ಗ್ರಾಮಸ್ಥರಿಗೂ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು