6:59 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ತಂಬಾಕು ಮಾರಾಟ: ಪಾಲಿಕೆ ಅಧಿಕಾರಿಗಳ ತಂಡದಿಂದ ದಿಢೀರ್ ಕಾರ್ಯಾಚರಣೆ; 32 ಪ್ರಕರಣ ದಾಖಲು

23/01/2023, 17:53

ಮಂಗಳೂರು(reporterkarnataka.com) ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ತಂಡ ಸೋಮವಾರ ನಗರದ ವಿವಿಧೆಡೆ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ 32 ಪ್ರಕರಣಗಳನ್ನು ದಾಖಲಿಸಿವೆ.


ಏಕಕಾಲದಲ್ಲಿ ನಗರದ ಬಿಜೈ ಹಾಗೂ ಕೆಎಸ್ಸಾರ್ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿ ಪ್ಲಾಸ್ಟಿಕ್ ಮತ್ತು ತಂಬಾಕು ನಿಯಂತ್ರಣ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳು ಸ್ಥಳದಲ್ಲಿಯೇ 32 ಪ್ರಕರಣ ದಾಖಲಿಸಿ 4 ಸಾವಿರ ರೂ. ದಂಡ ಸಂಗ್ರಹಿಸಲಾಯಿತು. ಸೆಕ್ಷನ್ 5ರ ಆಡಿ ನಾಲ್ಕು ನಾಮಫಲಕ ತೆರವುಗೊಳಿಸಲಾಯಿತು.

ಅಂಗಡಿಗಳಿಗೆ ಎಚ್ಚರಿಕೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಸಾಕಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ವಶ ಪಡೆದು ಎಚ್ಚರಿಕೆ ನೀಡಿದರು.
ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಜಯಶಂಕರ್, ಭಾಸ್ಕರ್, ಅಶ್ವಿನಿ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪುಂಡಲೀಕ ಲಕಾಟಿ, ಶೃತಿ ಸಾಲಿಯಾನ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು