1:52 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ತಂಬಾಕು ಮಾರಾಟ: ಪಾಲಿಕೆ ಅಧಿಕಾರಿಗಳ ತಂಡದಿಂದ ದಿಢೀರ್ ಕಾರ್ಯಾಚರಣೆ; 32 ಪ್ರಕರಣ ದಾಖಲು

23/01/2023, 17:53

ಮಂಗಳೂರು(reporterkarnataka.com) ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ತಂಡ ಸೋಮವಾರ ನಗರದ ವಿವಿಧೆಡೆ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ 32 ಪ್ರಕರಣಗಳನ್ನು ದಾಖಲಿಸಿವೆ.


ಏಕಕಾಲದಲ್ಲಿ ನಗರದ ಬಿಜೈ ಹಾಗೂ ಕೆಎಸ್ಸಾರ್ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿ ಪ್ಲಾಸ್ಟಿಕ್ ಮತ್ತು ತಂಬಾಕು ನಿಯಂತ್ರಣ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳು ಸ್ಥಳದಲ್ಲಿಯೇ 32 ಪ್ರಕರಣ ದಾಖಲಿಸಿ 4 ಸಾವಿರ ರೂ. ದಂಡ ಸಂಗ್ರಹಿಸಲಾಯಿತು. ಸೆಕ್ಷನ್ 5ರ ಆಡಿ ನಾಲ್ಕು ನಾಮಫಲಕ ತೆರವುಗೊಳಿಸಲಾಯಿತು.

ಅಂಗಡಿಗಳಿಗೆ ಎಚ್ಚರಿಕೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಸಾಕಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ವಶ ಪಡೆದು ಎಚ್ಚರಿಕೆ ನೀಡಿದರು.
ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಜಯಶಂಕರ್, ಭಾಸ್ಕರ್, ಅಶ್ವಿನಿ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪುಂಡಲೀಕ ಲಕಾಟಿ, ಶೃತಿ ಸಾಲಿಯಾನ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು