2:10 AM Thursday31 - July 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ಸೈಂಟ್ ಮೆರೀಸ್ ದ್ವೀಪ: ಡಿಎಸ್ ಎಲ್ ಆರ್ ಕ್ಯಾಮೆರಾ ಬಳಸಿ ಚಿತ್ರೀಕರಣಕ್ಕೆ ಶುಲ್ಕ; ಮಿಕ್ಕಿದೆಲ್ಲ ಉಚಿತ

23/01/2023, 22:18

ಉಡುಪಿ(reporterkarnataka.com): ಸೈಂಟ್ ಮೆರೀಸ್ ದ್ವೀಪದಲ್ಲಿ ಡಿಎಸ್ ಎಲ್ ಆರ್ ಕ್ಯಾಮೆರಾ ಬಳಸಿ ನಡೆಸುವ ಯಾವುದೇ ಚಿತ್ರೀಕರಣಕ್ಕೆ ಶುಲ್ಕ ವಿಧಿಸಿ ಆದಾಯಗಳಿಸಲು ಅವಕಾಶ ಕಲ್ಪಿಸಲಾಗಿದೆ.

ಮಲ್ಪೆ ಅಭಿವೃದ್ಧಿ ಸಮಿತಿ ವತಿಯಿಂದ ಸೀವಾಕ್ ಪ್ರದೇಶ ಮತ್ತು ಸೈಂಟ್‌ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕುರಿತು ಕರೆಯಲಾದ ಟೆಂಡರಿನಲ್ಲಿ ದ್ವೀಪದಲ್ಲಿ ಕೈಗೊಳ್ಳುವ ಯಾವುದೇ ರೀತಿಯ ಚಿತ್ರೀಕರಣಕ್ಕೆ ಡಿ.ಎಸ್.ಎಲ್.ಆರ್ ಕ್ಯಾಮೆರಾಗಳಿಗೆ ಶುಲ್ಕ ವಿಧಿಸಿ ನಿರ್ವಹಣಾದಾರರಿಗೆ ಆದಾಯ ಗಳಿಸುವ ಬಗ್ಗೆ ಅವಕಾಶ ನೀಡಲಾಗಿದೆ. ಆದರೆ ಇತರ ಕ್ಯಾಮೆರಾಗಳಾದ ಸೋನಿ ಹ್ಯಾಂಡಿ ಕ್ಯಾಮ್, ಕ್ಯಾನೋನ್ ಇ.ಒ.ಎಸ್, ಡಿಜಿಟಲ್ ಕ್ಯಾಮೆರಾ, ಸೋನಿ ಎಚ್.ಡಿ.ಆರ್.ಸಿ.ಎಕ್ಸ್ ಕ್ಯಾಮೆರಾಗಳನ್ನು ಮತ್ತು ಮೊಬೈಲ್‌ಗಳನ್ನು ಸೈಂಟ್‌ ಮೆರೀಸ್ ದ್ವೀಪದಲ್ಲಿ ಬಳಸಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಉಡುಪಿ ನಗರಸಭೆಯ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

ಸೆಂಟ್‌ ಮೆರೀಸ್ ದ್ವೀಪದಲ್ಲಿ ಪ್ರವಾಸಿಗರಿಂದ ಕ್ಯಾಮೆರಾಗಳಿಗೆ ಪಡೆಯುವ ಶುಲ್ಕವನ್ನು ರದ್ದುಗೊಳಿಸುವಂತೆ ಹಲವಾರು ಕಡೆಗಳಿಂದ ಹಾಗೂ ಜಾಲತಾಣದಲ್ಲಿ ಆಗ್ರಹಿಸುತ್ತಿದ್ದು, ದ್ವೀಪದಲ್ಲಿ ಯಾವುದೇ ರೀತಿಯ ಚಿತ್ರೀಕರಣಕ್ಕೆ ಉಪಯೋಗಿಸುವ ಡಿ.ಎಸ್.ಎಲ್.ಆರ್ ಕ್ಯಾಮೆರಾಗಳಿಗೆ ಪ್ರವಾಸಿಗರಿಂದ ಶುಲ್ಕ ವಸೂಲಿ ಮಾಡುವ ಕುರಿತು ಮರು ಪರಿಶೀಲಿಸಲಾಗುವುದು. ಇತರೆ ಕ್ಯಾಮೆರಾಗಳಿಗೆ ದ್ವೀಪದಲ್ಲಿ ಉಪಯೋಗಿಸಲು ಯಾವುದೇ ನಿರ್ಬಂಧ ಇರುವುದಿಲ್ಲವೆಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು