11:20 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ನ್ಯೂ ಬೆರ್ರಿ ಎನ್ ಕ್ಲೇವ್: ಪ್ರಸಿದ್ಧ ಕಟ್ಟಡ ನಿರ್ಮಾಣ ಸಂಸ್ಥೆ ‘ನಿಧಿಲ್ಯಾಂಡ್’ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ

24/01/2023, 11:04

ಮಂಗಳೂರು(reporterkarnataka.com): ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್ ಇದರ ನೂತನ ಕಚೇರಿ ಬಿಜೈ, ಕುಂಟಿಕಾನ ಬಳಿ ಇರುವ, ನ್ಯೂ ಬೆರ್ರಿ ಎನ್‌ಕ್ಲೇವ್ ನ 5ನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು.

ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ ಮಾತನಾಡಿ, ನಗರ ಪ್ರದೇಶಗಳಲ್ಲಿ ಗೃಹ ನಿರ್ಮಾಣ, ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಕೆಲವೊಂದು ಸಮಸ್ಯೆ ಗಳಿವೆ. ಇಂತಹ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಈಗಾಗಲೇ ಸಿಂಗಲ್ ವಿಂಡೋ ಸಿಸ್ಟಮ್ ಅನ್ನು ಜಾರಿಗೆ ತಂದು ಅವುಗಳ ಮೂಲಕ ಸಮಸ್ಯೆ ಪರಿಹರಿಸುವ ಕೆಲವು ಮಹತ್ವದ ನಿರ್ಧಾರ ಗಳನ್ನು ತೆಗೆದುಕೊಂಡಿದೆ. ಮುಂದಕ್ಕೆ ಇನ್ನಷ್ಟು ಉತ್ತಮ ರೀತಿಯಲ್ಲಿ ಸಹಾಯ ಮಾಡಲಿದೆ ಎಂದರು.

ನಿಧಿ ಲ್ಯಾಂಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ . ಸನಿಲ್ ಅವರು ಅತಿಥಿಗಳನ್ನು ಸ್ವಾಗತಿಸುತ್ತಾ, ತಮ್ಮ ಸಂಸ್ಥೆ ಬೆಳೆದು ಬಂದ ಬಗ್ಗೆ ವಿವರಿಸುತ್ತಾ ಕಳೆದ 10 ವರ್ಷಗಳಿಂದ ಸುಮಾರು 10 ಬಹು ಮಹಡಿಗಳ ಕಟ್ಟಡಗಳ ನಿರ್ಮಾಣ ಮಾಡಿದೆ. ಇದರಲ್ಲಿ ನನ್ನ ಪಾತ್ರ ಕಡಿಮೆ ಇದ್ದು ನನ್ನ ಸಹೋದ್ಯೋಗಿಗಳ ಪಾತ್ರವೇ ಅಧಿಕ. ಅವರ ಪರಿಶ್ರಮದಿಂದ ಸಂಸ್ಥೆ ಈ ಹಂತಕ್ಕೆ ಬೆಳೆದಿದೆ ಎಂದರು.
ಸಮಾರಂಭದಲ್ಲಿ ಅತಿಥಿಗಳಾಗಿ ಮಂಗಳೂರು ಬ್ರಹ್ಮ ಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿಜಿ ಅವರು ಸಾನಿಧ್ಯವನ್ನು ವಹಿಸಿದ್ದು, ಮಾಜಿ ಶಾಸಕ ಜೆ. ಆರ್.ಲೋಬೋ, ಪ್ರೇಮಾನಂದ ಶೆಟ್ಟಿ(ಮಾಜಿ ಮಹಾ ಪೌರರು), ರವಿಶಂಕರ್ ಮಿಜಾರ್, (ಅದ್ಯಕ್ಷರು, ಮೂಡ), ಮಾಜಿ ಕಾರ್ಪೊರೇಟರ್ ಲ್ಯಾನ್ಸ್ ಲಾಟ್ ಪಿಂಟೊ, ಸಿ. ಎ.ಶಾಂತಾರಾಮ ಶೆಟ್ಟಿ, ಪ್ರಕಾಶ್ ಇಲಂತಿಲ (ಸಿಇಒ ಹೊಸದಿಗಂತ), ಕ್ರೆಡೈ ಅಧ್ಯಕ್ಷ ಪುಷ್ಪರಾಜ ಜೈನ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು