4:51 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ವಿಟ್ಲ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನಘಟ್ಟಕ್ಕೆ ಕಾಯಕಲ್ಪ: ಬಂಟ್ವಾಳ ಶಾಸಕರ ನಿಧಿಯಿಂದ ವಿಶೇಷ ಕೊಡುಗೆ

25/01/2023, 10:22

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka.com

ಸಣ್ಣ ನೀರಾವರಿ ಇಲಾಖೆ ಮೂಲಕ 45 ಲಕ್ಷ ವೆಚ್ಚದಲ್ಲಿ ಬಂಟ್ವಾಳ ಶಾಸಕರ ವಿಶೇಷ ಪ್ರಯತ್ನದ ಮೂಲಕ ನಿರ್ಮಾಣವಾದ ವಿಟ್ಲಪಡ್ನೂರು ಗ್ರಾಮದ ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಬ್ರತ ಸ್ನಾನ ಘಟ್ಟ ಲೋಕಾರ್ಪಣೆಗೊಂಡಿತು.


ಸ್ನಾನಘಟದಲ್ಲಿ ಬೆಳಗೆ ಗಂಗಾ ಪೂಜೆ ಹಾಗೂ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು. ವಿಟ್ಲ ಸೀಮೆಗೆ ಸಂಬಂಧಿಸಿದ ಕೊಡಂಗಾಯಿ ನದಿಯ ನೀರು ಕಸಕಡ್ಡಿಗಳಿಂದ ಕಲುಷಿತಗೊಂಡಿದ್ದು, ಶಾಸಕರ ವಿಶೇಷ ಪ್ರಯತ್ನದ ಫಲವಾಗಿ ತಡೆಗೋಡೆ ನಿರ್ಮಾಣ ಹಾಗೂ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿ ನದಿಯಲ್ಲಿ ಸ್ನಾನಘಟ್ಟವನ್ನು ನಿರ್ಮಾಣ ಮಾಡಲಾಗಿದೆ. ಈ ಭಾಗದ ಜನರ ಜೊತೆಗೆ ಭಕ್ತರಿಗೆ ಅನುಕೂಲವಾಗುವಂತೆ ಜೊತೆಗೆ ಇದೇ ನದಿಗೆ ಶಾಸಕರ ಅನುಮಾನದ ಮೂಲಕ ಕೃಷಿ ಹಾಗೂ ಜಲವೃದ್ದಿಗಾಗಿ ಕಿಂಡಿಅಣೆಕಟ್ಟು ನಿರ್ಮಾಣದ ಕಾರ್ಯ ಅಂತಿಮವಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿಕರು ಇದರ ಸದುಪಯೋಗ ಪಡೆಯಲು ಅನುಕೂಲವಾಗಿದೆ.

ಸಭೆಯ ಅಧ್ಯಕ್ಷತೆಯನ್ನು ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ರೇಷ್ಮಾ ಶಂಕರಿ ಬಲಿಪಗುಳಿ ವಹಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೀತಾರಾಮ ಕೆದಿಲಾಯ,
ಅಜಯ ಟ್ರಸ್ಟಿನ ಸದಸ್ಯರಾದ ರವೀಂದ್ರ ಪುಣಚ, ಕಟ್ಟೆ ಸಮಿತಿಯ ಅಧ್ಯಕ್ಷ ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ ಶೆಟ್ಟಿ ಕರ್ಕಳ, ಹಾಗೂ ಸಭೆಯಲ್ಲಿ ಮೈತ್ರಿ ಗುರುಕುಲ ಬಳಗ, ಗ್ರಾಮ ಪಂಚಾಯತಿ ಸದಸ್ಯರು, ಕಟ್ಟೆ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು