1:29 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಭತ್ತ ಬೇರ್ಪಡಿಸುವ ಯಂತ್ರ ಆವಿಷ್ಕಾರ: ಹಾಕತ್ತೂರು 10ನೇ ತರಗತಿ ವಿದ್ಯಾರ್ಥಿನಿಯ ಮಹಾನ್ ಸಾಧನೆ

25/01/2023, 10:52

ಮಡಿಕೇರಿ(reporterkarnataka.com): ಗುರುಗಳ ಸಹಕಾರದೊಂದಿಗೆ ಭತ್ತದ ತೆನೆಯಿಂದ ಭತ್ತವನ್ನು ಬೇರ್ಪಡಿಸುವ ಯಂತ್ರವನ್ನು ತಯಾರಿಸಿ ರಾಜ್ಯದುದ್ದಗಲಕ್ಕೂ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿರುವ ಬಡವರ ಮನೆಯ ಮಗಳು ಇವಳು. ವಯಸ್ಸು ಕಿರಿದಾದರೂ ಸಾಧನೆ ಮಾತ್ರ ಹಿರಿದು.


ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ನಿವಾಸಿ ಕಾರ್ಮಿಕ ಶ್ರಮಜೀವಿ ಪಿ. ಶಿವಕುಮಾರ್ ರವರ ಪುತ್ರಿ ಮೆಘಾ ಎಸ್. ಅವರು ಪ್ರಸ್ತುತ ಹಾಕತ್ತೂರಿನ ಪ್ರೌಢಶಾಲೆಯ 10ನೇ ತರಗತಿಯ ವಿಧ್ಯಾರ್ಥಿನಿ.
ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಆನಂತರ
ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೊನ್ನೆಮೊನ್ನೆ ಧಾರವಾಡದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಂಟನೇಯ ಸ್ಥಾನವನ್ನು ಪಡೆದು ಇದೀಗ ಕೇರಳದ ತ್ರಿಶೂರ್ ನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ತಮ್ಮ ಗ್ರಾಮದ ವಿದ್ಯಾರ್ಥಿನಿ ಮೆಘಾಳ ಈ ಸಾಧನೆಗೆ ಮೇಕೇರಿ ಗ್ರಾಮದ ಸ್ವಾಗತ ಯುವಕ ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದು ಯುವಕ ಸಂಘದ ಪದಾಧಿಕಾರಿಗಳು ಈ ದಿನ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಅಭಿನಂಧನೆ ಸಲ್ಲಿಸುವುದರ ಜೊತೆಗೆ ಮುಂದಿನ ವಿಭಾಗ ಮಟ್ಟದ ಸ್ಫರ್ಧೆಗೆ ತೆರಳಲು ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿದರು. ಆ ಮೂಲಕ ಕಲಿಯುತ್ತಿರುವ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಮೇಘಾಳ ಉತ್ತಮ ಸಾಧನೆಯನ್ನು ಗೌರವಿಸಿ ಆಕೆಯ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಯಿತು.ಈ ಸಂದರ್ಭ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ವಿಜು ಹರೀಶ್ ಸದಸ್ಯರಾದ ಭವನ್ ಸಾಮಾಜಿಕ ಕಾರ್ಯಕರ್ತರಾದ ಸತ್ಯ ಕರ್ಕೇರ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು