12:24 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಭತ್ತ ಬೇರ್ಪಡಿಸುವ ಯಂತ್ರ ಆವಿಷ್ಕಾರ: ಹಾಕತ್ತೂರು 10ನೇ ತರಗತಿ ವಿದ್ಯಾರ್ಥಿನಿಯ ಮಹಾನ್ ಸಾಧನೆ

25/01/2023, 10:52

ಮಡಿಕೇರಿ(reporterkarnataka.com): ಗುರುಗಳ ಸಹಕಾರದೊಂದಿಗೆ ಭತ್ತದ ತೆನೆಯಿಂದ ಭತ್ತವನ್ನು ಬೇರ್ಪಡಿಸುವ ಯಂತ್ರವನ್ನು ತಯಾರಿಸಿ ರಾಜ್ಯದುದ್ದಗಲಕ್ಕೂ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿರುವ ಬಡವರ ಮನೆಯ ಮಗಳು ಇವಳು. ವಯಸ್ಸು ಕಿರಿದಾದರೂ ಸಾಧನೆ ಮಾತ್ರ ಹಿರಿದು.


ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ನಿವಾಸಿ ಕಾರ್ಮಿಕ ಶ್ರಮಜೀವಿ ಪಿ. ಶಿವಕುಮಾರ್ ರವರ ಪುತ್ರಿ ಮೆಘಾ ಎಸ್. ಅವರು ಪ್ರಸ್ತುತ ಹಾಕತ್ತೂರಿನ ಪ್ರೌಢಶಾಲೆಯ 10ನೇ ತರಗತಿಯ ವಿಧ್ಯಾರ್ಥಿನಿ.
ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಆನಂತರ
ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೊನ್ನೆಮೊನ್ನೆ ಧಾರವಾಡದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಂಟನೇಯ ಸ್ಥಾನವನ್ನು ಪಡೆದು ಇದೀಗ ಕೇರಳದ ತ್ರಿಶೂರ್ ನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ತಮ್ಮ ಗ್ರಾಮದ ವಿದ್ಯಾರ್ಥಿನಿ ಮೆಘಾಳ ಈ ಸಾಧನೆಗೆ ಮೇಕೇರಿ ಗ್ರಾಮದ ಸ್ವಾಗತ ಯುವಕ ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದು ಯುವಕ ಸಂಘದ ಪದಾಧಿಕಾರಿಗಳು ಈ ದಿನ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಅಭಿನಂಧನೆ ಸಲ್ಲಿಸುವುದರ ಜೊತೆಗೆ ಮುಂದಿನ ವಿಭಾಗ ಮಟ್ಟದ ಸ್ಫರ್ಧೆಗೆ ತೆರಳಲು ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿದರು. ಆ ಮೂಲಕ ಕಲಿಯುತ್ತಿರುವ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಮೇಘಾಳ ಉತ್ತಮ ಸಾಧನೆಯನ್ನು ಗೌರವಿಸಿ ಆಕೆಯ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಯಿತು.ಈ ಸಂದರ್ಭ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ವಿಜು ಹರೀಶ್ ಸದಸ್ಯರಾದ ಭವನ್ ಸಾಮಾಜಿಕ ಕಾರ್ಯಕರ್ತರಾದ ಸತ್ಯ ಕರ್ಕೇರ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು