10:47 PM Wednesday20 - August 2025
ಬ್ರೇಕಿಂಗ್ ನ್ಯೂಸ್
ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ… ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ

ಇತ್ತೀಚಿನ ಸುದ್ದಿ

ಭತ್ತ ಬೇರ್ಪಡಿಸುವ ಯಂತ್ರ ಆವಿಷ್ಕಾರ: ಹಾಕತ್ತೂರು 10ನೇ ತರಗತಿ ವಿದ್ಯಾರ್ಥಿನಿಯ ಮಹಾನ್ ಸಾಧನೆ

25/01/2023, 10:52

ಮಡಿಕೇರಿ(reporterkarnataka.com): ಗುರುಗಳ ಸಹಕಾರದೊಂದಿಗೆ ಭತ್ತದ ತೆನೆಯಿಂದ ಭತ್ತವನ್ನು ಬೇರ್ಪಡಿಸುವ ಯಂತ್ರವನ್ನು ತಯಾರಿಸಿ ರಾಜ್ಯದುದ್ದಗಲಕ್ಕೂ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿರುವ ಬಡವರ ಮನೆಯ ಮಗಳು ಇವಳು. ವಯಸ್ಸು ಕಿರಿದಾದರೂ ಸಾಧನೆ ಮಾತ್ರ ಹಿರಿದು.


ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ನಿವಾಸಿ ಕಾರ್ಮಿಕ ಶ್ರಮಜೀವಿ ಪಿ. ಶಿವಕುಮಾರ್ ರವರ ಪುತ್ರಿ ಮೆಘಾ ಎಸ್. ಅವರು ಪ್ರಸ್ತುತ ಹಾಕತ್ತೂರಿನ ಪ್ರೌಢಶಾಲೆಯ 10ನೇ ತರಗತಿಯ ವಿಧ್ಯಾರ್ಥಿನಿ.
ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಆನಂತರ
ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೊನ್ನೆಮೊನ್ನೆ ಧಾರವಾಡದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಂಟನೇಯ ಸ್ಥಾನವನ್ನು ಪಡೆದು ಇದೀಗ ಕೇರಳದ ತ್ರಿಶೂರ್ ನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ತಮ್ಮ ಗ್ರಾಮದ ವಿದ್ಯಾರ್ಥಿನಿ ಮೆಘಾಳ ಈ ಸಾಧನೆಗೆ ಮೇಕೇರಿ ಗ್ರಾಮದ ಸ್ವಾಗತ ಯುವಕ ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದು ಯುವಕ ಸಂಘದ ಪದಾಧಿಕಾರಿಗಳು ಈ ದಿನ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಅಭಿನಂಧನೆ ಸಲ್ಲಿಸುವುದರ ಜೊತೆಗೆ ಮುಂದಿನ ವಿಭಾಗ ಮಟ್ಟದ ಸ್ಫರ್ಧೆಗೆ ತೆರಳಲು ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿದರು. ಆ ಮೂಲಕ ಕಲಿಯುತ್ತಿರುವ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಮೇಘಾಳ ಉತ್ತಮ ಸಾಧನೆಯನ್ನು ಗೌರವಿಸಿ ಆಕೆಯ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಯಿತು.ಈ ಸಂದರ್ಭ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ವಿಜು ಹರೀಶ್ ಸದಸ್ಯರಾದ ಭವನ್ ಸಾಮಾಜಿಕ ಕಾರ್ಯಕರ್ತರಾದ ಸತ್ಯ ಕರ್ಕೇರ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು