11:40 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಕಪಿತಾನಿಯೋ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 2 ದಿನದ ಕಲಿಕಾ ಹಬ್ಬಕ್ಕೆ ಚಾಲನೆ

25/01/2023, 11:19

ಮಂಗಳೂರು(reporterkarnataka.com): ನಗರದ ನಾಗೂರಿ ಸಮೀಪದ ಕಪಿತಾನಿಯೋ
ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 2 ದಿನದ ಕಲಿಕಾ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಉತ್ತಮ ಶಿಕ್ಷಣ ದಿಂದ ವಿಶ್ವದಲ್ಲೇ ನಮ್ಮದೇಶ ಮುಂದಿದೆ. ಜೀವನದ ಮೊದಲ ಗುರು ಶಿಕ್ಷಕರು. ಆ ಗುರುಗಳು ಮಕ್ಕಳನ್ನು ಉತ್ತಮ ಪ್ರಜೆಯಾಗಿ ಕೆತ್ತಿ ಸಮಾಜಕ್ಕೆ ನೀಡುತ್ತಾರೆ. ಎರಡು ದಿನಗಳ ಕಲಿಕಾ ಹಬ್ಬದ ಪ್ರಯೋಜನ ಪಡೆಯಿರಿ ಎಂದರು.

ಈ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯತ್ಯೇತರ ವಿಷಯಗಳನ್ನು ಕಲಿಯಬೇಕಾಗಿದೆ. ಒನ್ಲೈನ್ ಶಾಪಿಂಗ್ ಗಳ ಬಗ್ಗೆ ಮಾಹಿತಿಯನ್ನೂ ಈ ಶಿಕ್ಷಕರರು ನೀಡಲಿದ್ದಾರೆ ಎಂದು ಅವರು ನುಡಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಮಾತನಾಡಿ, ಈ ಕಲಿಕಾ ಹಬ್ಬದ ಹಿಂದಿನ ತಯಾರಿಯ ಶಿಕ್ಷಕರ ಶ್ರಮ ಅಭೂತ ಪೂರ್ವ. ಮಕ್ಕಳ ಬೆಳವಣಿಗೆಯ ಹಿಂದಿನ ನೆರಳು ಶಿಕ್ಷಕರು ಎಂದು ಕಥೆಯ ಮೂಲಕ ಮಕ್ಕಳಿಗೆ ವಿವರಿಸಿದರು.


ವಿಶ್ವ ಹಿಂದೂ ಪರಿಷತ್ ನ ಚರಣ್ ಪಂಪ್ವೆಲ್, ಇಸಿಒ ಸುಷ್ಮಾ,ಬಿ. ಆರ್.ಬಿ. ತಾಸಿನ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ. ಜಿ, ಸರಕಾರಿ ಪ್ರೌಢಶಾಲಾ ಮುಖ್ಯ್ಯೋಪಾಧ್ಯಯ ಜಗದೀಶ್, ಶಿಕ್ಷಕ ವೃಂದ ಮತ್ತಿರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು