6:47 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನಾಗಮಂಗಲ: ವಿದ್ಯುತ್ ಖಾಸಗೀಕರಣ, ಕೃಷಿ ಕಾಯ್ದೆ ರದ್ದತಿ ಆಗ್ರಹಿಸಿ ಫೆ. 3ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

25/01/2023, 18:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘದಿಂದ ಫೆಬ್ರವರಿ 3ರಂದು ನಾಗಮಂಗಲದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು
ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ಹೇಳಿದರು.

ಅವರು ನಾಗಮಂಗಲ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಿದ್ಯುತ್ ಖಾಸಗಿಕರಣ ರದ್ದತಿ, ಕೃಷಿ ಕಾಯಿದೆ ಮಾರಕವಾಗಿರುವ ಕಾಯಿದೆ ಸರ್ಕಾರ ಕೂಡಲೇ ರದ್ದುಪಡಿಸುವಂತೆ ಮತ್ತು ರಾಗಿ ಭತ್ತ ಕೊಬ್ಬರಿ ಖರೀದಿ ಕೇಂದ್ರವನ್ನ ಮತ್ತು ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಲು ಬೃಹತ್ ರೈತ ಪ್ರತಿಭಟನೆ ಮತ್ತು ಧರಣಿ ಯನ್ನು ಏರ್ಪಡಿಸಲಾಗಿದೆ.

ಸರ್ಕಾರವು ರೈತರಿಗೆ ಸಮರ್ಪಕವಾಗಿ ಇದುವರೆಗೂ ಬೆಲೆ ನಿಗದಿ ಮಾಡದೆ ಇರುವುದು ಹಾಲು, ಕೊಬ್ಬರಿ ಕನಿಷ್ಠ ದರ ನಿಗದಿ ಮಾಡದೇ ಇರುವುದು ರೈತರ ಸಂಕಷ್ಟ ಕೇಳುವರು ಇಲ್ಲದಂತಾಗಿದೆ. ಪ್ರತಿಯೊಬ್ಬ ರೈತರು ಮಳೆ ಅವಾಂತರದಿಂದಾಗಿ ಬೀದಿಗಳಿದು ಹೋರಾಟ ಮಾಡುವ ಸಂಭವವಾಗಿದ್ದು ಕೂಡಲೇ ಸರ್ಕಾರ ಕೃಷಿಗೆ ಸಂಬಂಧಪಟ್ಟಂತಹ ಮಾರಕವಾದ ಕಾಯ್ದೆಗಳನ್ನು ಕೈ ಬಿಟ್ಟು ರೈತರಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳುವ ಸಲುವಾಗಿ ಫೆಬ್ರವರಿ 3ರಂದು ನಾಗಮಂಗಲ ಟಿಬಿ ವೃತ್ತದಿಂದ ರೈತರ ಬೃಹತ್ ಮೆರವಣಿಗೆಯೊಂದಿಗೆ ಮಿನಿ ವಿಧಾನಸೌಧದ ಮೆರವಣಿಗೆ ಮಾಡಲಾಗಿದ್ದು ರೈತರ ಮನವಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ)ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟೇಶ್, ಕಾರ್ಯಾಧ್ಯಕ್ಷ ಜಿ.ಟಿ.ಹರೀಶ್, ಉಪಾಧ್ಯಕ್ಷ ಕೆ.ಜೆ.ಯೋಗೇಶ್,
ಬೆಳ್ಳೂರು ಹೋಬಳಿ ಮಟ್ಟದ ಅಧ್ಯಕ್ಷ ಪಾಪಣ್ಣ, ಖಜಾಂಚಿ ಬೋರೇಗೌಡ, ಕಾರ್ಯದರ್ಶಿ ದೇವರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು