1:53 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಾಗಮಂಗಲ: ವಿದ್ಯುತ್ ಖಾಸಗೀಕರಣ, ಕೃಷಿ ಕಾಯ್ದೆ ರದ್ದತಿ ಆಗ್ರಹಿಸಿ ಫೆ. 3ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

25/01/2023, 18:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘದಿಂದ ಫೆಬ್ರವರಿ 3ರಂದು ನಾಗಮಂಗಲದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು
ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ಹೇಳಿದರು.

ಅವರು ನಾಗಮಂಗಲ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಿದ್ಯುತ್ ಖಾಸಗಿಕರಣ ರದ್ದತಿ, ಕೃಷಿ ಕಾಯಿದೆ ಮಾರಕವಾಗಿರುವ ಕಾಯಿದೆ ಸರ್ಕಾರ ಕೂಡಲೇ ರದ್ದುಪಡಿಸುವಂತೆ ಮತ್ತು ರಾಗಿ ಭತ್ತ ಕೊಬ್ಬರಿ ಖರೀದಿ ಕೇಂದ್ರವನ್ನ ಮತ್ತು ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಲು ಬೃಹತ್ ರೈತ ಪ್ರತಿಭಟನೆ ಮತ್ತು ಧರಣಿ ಯನ್ನು ಏರ್ಪಡಿಸಲಾಗಿದೆ.

ಸರ್ಕಾರವು ರೈತರಿಗೆ ಸಮರ್ಪಕವಾಗಿ ಇದುವರೆಗೂ ಬೆಲೆ ನಿಗದಿ ಮಾಡದೆ ಇರುವುದು ಹಾಲು, ಕೊಬ್ಬರಿ ಕನಿಷ್ಠ ದರ ನಿಗದಿ ಮಾಡದೇ ಇರುವುದು ರೈತರ ಸಂಕಷ್ಟ ಕೇಳುವರು ಇಲ್ಲದಂತಾಗಿದೆ. ಪ್ರತಿಯೊಬ್ಬ ರೈತರು ಮಳೆ ಅವಾಂತರದಿಂದಾಗಿ ಬೀದಿಗಳಿದು ಹೋರಾಟ ಮಾಡುವ ಸಂಭವವಾಗಿದ್ದು ಕೂಡಲೇ ಸರ್ಕಾರ ಕೃಷಿಗೆ ಸಂಬಂಧಪಟ್ಟಂತಹ ಮಾರಕವಾದ ಕಾಯ್ದೆಗಳನ್ನು ಕೈ ಬಿಟ್ಟು ರೈತರಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳುವ ಸಲುವಾಗಿ ಫೆಬ್ರವರಿ 3ರಂದು ನಾಗಮಂಗಲ ಟಿಬಿ ವೃತ್ತದಿಂದ ರೈತರ ಬೃಹತ್ ಮೆರವಣಿಗೆಯೊಂದಿಗೆ ಮಿನಿ ವಿಧಾನಸೌಧದ ಮೆರವಣಿಗೆ ಮಾಡಲಾಗಿದ್ದು ರೈತರ ಮನವಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ)ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟೇಶ್, ಕಾರ್ಯಾಧ್ಯಕ್ಷ ಜಿ.ಟಿ.ಹರೀಶ್, ಉಪಾಧ್ಯಕ್ಷ ಕೆ.ಜೆ.ಯೋಗೇಶ್,
ಬೆಳ್ಳೂರು ಹೋಬಳಿ ಮಟ್ಟದ ಅಧ್ಯಕ್ಷ ಪಾಪಣ್ಣ, ಖಜಾಂಚಿ ಬೋರೇಗೌಡ, ಕಾರ್ಯದರ್ಶಿ ದೇವರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು