1:16 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಕಿಂಗ್ ಆಗೋಲ್ಲ, ನಾನು ಕಿಂಗ್ ಮೇಕರ್ ಆಗ್ತೀನಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

25/01/2023, 18:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಾನು ಕಿಂಗ್ ಆಗೊಲ್ಲ. ನಾನು ಕಿಂಗ್ ಮೇಕರ್ ಆಗುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ಅಥಣಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಒಂದು ವೇಳೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದಿದ್ದರೆ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಒಲವು ಹೊಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಯಾರು ಒಳ್ಳೆಯ ಮೇಕಪ್ ಹಾಕಿಕೊಂಡು ಬರುತ್ತಾರೆ ನೋಡೋಣ ಎಂದು ಚಟಾಕಿ ಹಾರಿಸಿದರು.

ರಾಜ್ಯ ಸಾರ್ವತ್ರಿಕ ಚುನಾವಣೆ ನಂತರ ನಮ್ಮ ನಡೆ ಪ್ರಕಟಿಸುತ್ತೇವೆ ಎಂದರು.
ಕಾಂಗ್ರೆಸ್ ಉಚಿತ ವಿದ್ಯುತ್ ನೀಡುವ ಘೋಷಣೆ ಕುರಿತು ಮಾತನಾಡಿದ ಇಬ್ರಾಹಿಂ, ನೀರು ಕೊಡದವರು ಉಚಿತವಾಗಿ ಏನಾದರೂ ನೀಡುತ್ತಾರಾ? ಎಲ್ಲವೂ ಸುಳ್ಳು ಹೇಳುತ್ತಾರೆ. ಆದರೆ ಕುಮಾರಸ್ವಾಮಿ ಹೇಳಿದಂತೆ ನಡೆಯುತ್ತಾರೆ.

ಹೇಳಿದಂತೆ ನಡೆಯುವುದು ಜೆಡಿಎಸ್ ಪಕ್ಷ ಮಾತ್ರ ಎಂದರು.
ನಾವು ಸ್ಪಷ್ಟವಾಗಿ ಬಹುಮತ ಪಡೆಯುತ್ತೇವೆ..
ನುಡಿದಂತೆ ನಡೆಯುತ್ತೇವೆ. ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್ ಅಭ್ಯರ್ಥಿ ಲಿಸ್ಟ್ ಬಿಡುಗಡೆ ಮಾಡಿದೆ. ಈಗಾಗಲೇ ನಾವು 93 ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ್ದೇವೆ. ಬಿಜೆಪಿ ಅವರು ಒಂದು ಅಭ್ಯರ್ಥಿ ಹೆಸರು ಘೋಷಣೆ ಮಾಡಲಿ‌ ನೋಡೋಣ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಿಂದ ಸ್ವರ್ಧೆ ಮಾಡುತ್ತಾರೆ?
ಜಗದೀಶ್ ಶೆಟ್ಟರ್ ಎಲ್ಲಿಂದ ಸ್ವರ್ಧಿಸುತ್ತಾರೆ ಎಂಬುದು ಮೊದಲು ಹೇಳಲಿ ಎಂದು ಅವರು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು