1:48 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಗ್ರಾಮ ದೇವತೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ ಖದೀಮರು: ಚಂದ್ರಗಿರಿ ದೇವಿಯ ಒಡವೆ ಕಳ್ಳತನ; ಬೆಚ್ಚಿಬಿದ್ದ ಗ್ರಾಮಸ್ಥರು

25/01/2023, 22:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ‌ ಸಂಬರಗಿ ಗ್ರಾಮದ ಗ್ರಾಮದೇವತೆ ಚಂದ್ರಗಿರಿ ದೇವಿ ಒಡವೆ ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಕಾಗವಾಡ- ಅಥಣಿ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ನಡೆಯುತ್ತಿದ್ದು, ಇದೀಗ ಗ್ರಾಮದೇವತೆಯ ಚಿನ್ನಾಭರಣಕ್ಕೆ ಕಳ್ಳರು ಕೈ ಹಾಕಿದ್ದಾರೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.


ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ದೇವಸ್ಥಾನ ಸೇರಿದಂತೆ ಸರಣಿ ಮನೆ ಕಳ್ಳತನ ಈಗಾಗಲೇ ನಡೆದಿದೆ. ಗಡಿ ಗ್ರಾಮಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಐದು ತಾಳಿ ಸೇರಿದಂತೆ ಮನೆಯಲ್ಲಿರುವ ಹಣ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಹೆಡೆಮುರಿ ಕಟ್ಟುವಂತೆ ಸ್ಥಳೀಯರ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಅಥಣಿ ಕ್ರೈಮ್ ಪಿ ಎಸ್ ಐ ರಾಕೇಶ್ ಬಗಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು