11:34 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಡಂತ್ಯಾರು: ರಾಷ್ಟ್ರೀಯ ಮತದಾರರ ದಿನಾಚರಣೆ; ರಸ್ತೆ ಜಾಥಾ, ಬೀದಿ ನಾಟಕ

26/01/2023, 11:51

ಪುಂಜಾಲಕಟ್ಟೆ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ , ಮತದಾರರ ಸಾಕ್ಷರತಾ ಸಂಘ ಮತ್ತು ದತ್ತು ಗ್ರಾಮವಾದ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಹಾಗೂ ಜೆಸಿಐ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಸ್ತೆ ಜಾಥಾ ಮತ್ತು ಬೀದಿ ನಾಟಕವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಟಿ ಕೆ. ಶರತ್ ಕುಮಾರ್ ವಹಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ತಿಳಿಸಿದರು.


ಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಪ್ರಭ ಮತ್ತು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ ಸುಸಾನ ಅವರು ಹೊಸ ಮತದಾರರಿಗೆ ಗುರುತಿನ ಚೀಟಿ ನೀಡುವ ಮುಖಾಂತರ ಮತ್ತು ಮತದಾನದ ಭಿತ್ತಿ ಪತ್ರವನ್ನು ಹಸ್ತಾಂತರಿಸುವ ಮುಖಾಂತರ ಸಾಂಕೇತಿಕವಾಗಿ ರಸ್ತೆ ಜಾಥಾಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಪಿಡಿಓ ಪುರುಷೋತ್ತಮ ಜಿ. ಪ್ರಸ್ತಾವಿಕ ನುಡಿಗಳನ್ನು ಆಡಿದರು. ರಾಜಶೇಖರ್ ರೈ (ಪಿಡಿಓ ಗ್ರಾಮ ಪಂಚಾಯತ್ ಮಾಲಾಡಿ) ಅವರು ಮತದಾನದ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಮಡಂತ್ಯಾರ್ ಬಸ್ಸು ನಿಲ್ದಾಣದ ಆವರಣದಲ್ಲಿ ಮತದಾನದ ಮಹತ್ವದ ಕುರಿತು ಸ್ವಯಂಸೇವಕರಿಂದ ಬೀದಿ ನಾಟಕ ಪ್ರದರ್ಶನ ನಡೆಯಿತು ಕಾರ್ಯಕ್ರಮದಲ್ಲಿ ಸಂಗೀತಾ ಎ. ಶೆಟ್ಟಿ (ಉಪಾಧ್ಯಕ್ಷರು ,ಗ್ರಾಮ ಪಂಚಾಯತ್ ಮಡಂತ್ಯಾರು), ಅಶೋಕ್ (ಅಧ್ಯಕ್ಷರು ಜೆಸಿಐ ಮಡಂತ್ಯಾರ್), ಪಂಚಾಯಿತಿ ಸದಸ್ಯರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಸಂತೋಷ್ ಪ್ರಭು ಎಂ, ಚಿತ್ರಾ ಪಡಿಯಾರ್ ,ಭಾರತೀಯ ಯುವ ರೆಡ್ ಕ್ರಾಸ್ ನ ಸಂಚಾಲಕರಾದ ಡಾ. ವೈಶಾಲಿ ಯು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು