8:58 PM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ 

07/07/2021, 15:29

ನವದೆಹಲಿ(reporterkarnataka news):

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂದಿಯನ್ನುbಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದ್ದು, ಅವರೂ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ಅವರು

ನಡೆಯುತ್ತಿರುವ ಮೊದಲ ಸಂಪುಟ ಪುನರ್ರಚನೆ ಇದಾಗಿದೆ. ಹಲವು ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊಸಬರಿಗೆ ದಾರಿ ಮಾಡಿಕೊಟ್ಟಿದ್ದಾರೆ.

ಬಿಜೆಪಿ ಸೇರಿರುವ ಮಾಜಿ ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ, ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸಂಸದ ಭೂಪೇಂದ್ರ ಯಾದವ್, ಮತ್ತು ಉತ್ತರ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ಬಿ ಎಲ್ ವರ್ಮಾ ಅವರಿಗೆ ಸಂಪುಟದಲ್ಲಿ ಸ್ಥಾನ ಖಚಿತಪಡಿಸಿ ಕರೆಗಳು ಬಂದಿವೆ ಎನ್ನಲಾಗುತ್ತಿದೆ.

ಕರ್ನಾಟಕದ ಸಂಸದೆ ಶೋಭಾ ಕರಂದ್ಲಾಜೆ, ಸಿರ್ಸಾ ಸಂಸದೆ ಸುನೀತಾ ದುಗ್ಗರ್, ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಮತ್ತು ಮಹಾರಾಷ್ಟ್ರ ಸಂಸದೆಯರಾದ ಹಿನಾ ಗವಿತ್ ಮತ್ತು ಪ್ರೀತಂ ಮುಂಡೆ ಸೇರಿದಂತೆ ಮಹಿಳೆರಿಗೆ ಸಂಪುಟ ವಿಸ್ತರಣೆಯಲ್ಲಿ ಪ್ರಾಮುಖ್ಯತೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು