8:07 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ

27/01/2023, 21:26

ಬಂಟ್ವಾಳ(reporterkarnataka.com): ಸರಕಾರಿ ಪ್ರೌಢಶಾಲೆ ಕಲ್ಲರ ಕೋಡಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.

ಧ್ವಜಾರೋಹಣವನ್ನು ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಅವರು ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನವಾಜ್ ಎಂ.ಬಿ. ಅವರು ಭಾಗವಹಿಸಿದ್ದರು. ವಂದೇ ಮಾತರಂ ಧ್ವಜ ಗೀತೆ ಯನ್ನು ವಿದ್ಯಾರ್ಥಿಗಳು ಹಾಡುವ ಮೂಲಕ ಗೌರವವನ್ನು ಸಲ್ಲಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಮೀರಾರವರು ಸ್ವಾಗತಿಸಿದರು. 10ನೇ ತರಗತಿ ಅಮಿನತ್ ಅಫೀಜಾ ಅವರು ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.


2022ನೇ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿ ಗಳಾದ ಮೋಕ್ಷಿತ ,ಆತ್ಮಿಕ, ಮನ್ವಿತ್ ಮತ್ತು ನಿಶಾ ಅವರನ್ನು ನಗದು ಬಹುಮಾನ, ಸ್ಮರಣೆಕೆ ನೀಡುವುದರ ಮೂಲಕ ಅಭಿನಂದಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ನವಾಜ್ ರವರು ಗಣರಾಜ್ಯೋತ್ಸವದ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ವಿನಿತರವರು ವಾಚಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸೀಮಾ ಮರಿಯ ಡಿಸೋಜ ಅವರು ಎಲ್ಲರಿಗೂ ಧನ್ಯವಾದಗಳು ಅರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಭಾಕರ್ ರವರು ಮಾಡಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕ ವೃಂದ ,ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಿಹಿ ತಿಂಡಿ ವಿತರಣೆಯೊಂದಿಗೆ
ಕಾರ್ಯಕ್ರಮ ಮುಕ್ತಾಯಗೊಂಡಿತು

ಇತ್ತೀಚಿನ ಸುದ್ದಿ

ಜಾಹೀರಾತು