8:32 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ

28/01/2023, 12:09

ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗೆ ಜರುಗಿತು.

ಸಮ್ಮೇಳನದಲ್ಲಿ ಶಿಕ್ಷಣ ಹಾಗೂ ಸಂಘಟನೆಗಾಗಿ ಸೇವೆ ಸಲ್ಲಿಸಿದ
ಕಬಕ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯಾಗಿರುವ ಶಾಂತಾ ಪುತ್ತೂರು ಅವರಿಗೆ ರಾಜ್ಯ ಮಟ್ಟದ ಆದಿ ಗ್ರಾಮೋತ್ಸವ ಯುವಸಿರಿ ಗೌರವ 2022 ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಮ್ಮೇಳನದ ಅಧ್ಯಕ್ಷತೆ ಯನ್ನು ಕವಯಿತ್ರಿ ರೇಷ್ಮಾ ಶೆಟ್ಟಿ ಗೊರೂರು ವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪತ್ರಕರ್ತ, ಸಂಘಟಕ ಡಾ.ಶೇಖರ್ ಅಜೆಕಾರು,ಯಕ್ಷಪೋಷಕ ವಿಜಯ್ ಶೆಟ್ಟಿ,ಅರುಣ್ ಶೆಟ್ಟಿಗಾರ್, ಬಾಲಪ್ರತಿಭೆ ಸುನಿಧಿ ಅಜೆಕಾರು, ಸಾಹಿತಿ ಜಯಾನಂದ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು