5:58 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಕರ್ನಾಟಕವನ್ನು ಎಟಿಎಂ ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ: ಬಂಟ್ವಾಳ ಗ್ರಾಮ ವಿಕಾಸ ಯಾತ್ರೆ ಸಮಾರೋಪದಲ್ಲಿ ಅಣ್ಣಾಮಲೈ ಆರೋಪ

28/01/2023, 23:25

ಬಂಟ್ವಾಳ(reporterkarnataka.com): ಕರ್ನಾಟಕಕ್ಕೆ ಬಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಂದು ಪ್ರತಿ ಮನೆಯ ಮಹಿಳೆಗೆ 2000 ಸಾವಿರ ಕೊಡುತ್ತೇವೆ ಅಂತ ಹೇಳಿದ್ದಾರೆ. ಕರ್ನಾಟಕದ ಮತದಾರರು ಈ ಸುಳ್ಳು ಭರವಸೆ ನಂಬ ಬಾರದು. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಕರ್ನಾಟಕವನ್ನು ಎಟಿಎಂ ಆಗಿ
ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡ ಬಾರದು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಗ್ರಾಮ ವಿಕಾಸ ಯಾತ್ರೆ ಸಮಾರೋಪ ಸಮಾರಂಭ ವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕು ವರೆ ವರ್ಷ ದಲ್ಲಿ ಬಂಟ್ವಾಳ ಚಿತ್ರಣ ಬದಲಾಗದೆ. ಬಂಟ್ವಾಳ ಶಾಂತವಾಗಿದೆ ಬಹಳ ಅಭಿವೃದ್ದಿ ಯಾಗಿದೆ. ಬಂಟ್ವಾಳದಲ್ಲಿ ಸಾಮರಸ್ಯ ನೆಲೆಸಿದೆ ಎಂದರು.
ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂ ಕೆ ಮತ್ತು ಕಾಂಗ್ರೆಸ್ ನವರು ಹೇಳಿದ ಸುಳ್ಳನ್ನೇ ಕರ್ನಾಟಕ ದಲ್ಲಿ ರಿಪೀಟ್ ಆಗ್ತಿದೆ. ತಮಿಳುನಾಡಿನ ರೇಷನ್ ಕಾರ್ಡ್ ಗೆ ಪ್ರತಿ ತಿಂಗಳು 1000 ಸಾವಿರ ಕೊಡುವುದಾಗಿ ಹೇಳಿದ್ದರು.

21 ತಿಂಗಳಾಯಿತು ಯಾವೊಬ್ಬರಿಗೂ ಈ ವರವಗೂ 1ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೆ ಅಧಿಕಾರಕ್ಕೆ ಬಂದಿದ್ದಾರೆ ಎಂದು ಅವರು ನುಡಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಎದ್ದರೆ ಕೂರಲು ಆಗದ, ಕೂತರೆ ನಿಲ್ಲಲು ಆಗದ ಶಾಸಕ ನಮ್ಮವರಲ್ಲ , ಇವರ ಪ್ರಜಾಧ್ವನಿ ಯಾತ್ರೆ ಕೇವಲ ಬಿಜೆಪಿ ಬೈಯ್ಯುವ ಯಾತ್ರೆ ಎಂದು ಟೀಕಿಸಿದರು.

ಈಗ 200 ಯುನಿಟ್ ಕರೆಂಟ್ ಫ್ರೀ ಕೊಡ್ತೇವೆ ಅಂತ ಹೇಳುತ್ತಾರೆ. ಬೆಳ್ಳಾರೆಯ ಸಾಯಿ ಗಿರಿಧರ್ ಕರೆಂಟ್ ಇಲ್ಲ ಅಂತ ಡಿಕೆಶಿ ಗೆ ಕಾಲ್ ಮಾಡಿದ್ರು,ಎಂಥ ಮಾರ್ರೆ ಸಾವು ಕರೆಂಟ್ ಇಲ್ಲ ಅಂತ ಗಿರಿಧರ್ ರೈ ಹೇಳಿದ್ರು,ಆದರೆ ನನ್ನ ಸಾವಿನ ಬಗ್ಗೆ ಮಾತನಾಡಿದ ಅಂತ ಡಿಕೆಶಿ, ಗಿರಿಧರ್ ರೈಯನ್ನ ಪೊಲೀಸ್ ಮೂಲಕ ಅರೆಸ್ಟ್ ಮಾಡಿಸಿದ್ರು,ಇಂಥವರು ಇನ್ನೂರು ಯುನಿಟ್ ಕರೆಂಟ್ ಫ್ರೀ ಕೊಡ್ತಾರಂತೆ ಎಂದು ಸಿ.ಟಿ. ರವಿ ಲೇವಡಿ ಮಾಡಿದರು.
ಶಾಸಕ ರಾಜೇಶ್ ನಾಯ್ಕ್, ಪಕ್ಷದ ಮುಖಂಡರುಗಳು ,ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು