9:17 PM Wednesday1 - April 2026
ಬ್ರೇಕಿಂಗ್ ನ್ಯೂಸ್
ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ…

ಇತ್ತೀಚಿನ ಸುದ್ದಿ

ಜಾತ್ರೆಯಲ್ಲಿ ಕೈಹಿಡಿದು ಎಳೆದ ಯುವಕ: ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

29/01/2023, 14:56

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಜಾತ್ರೆಯಲ್ಲಿ ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ಮನನೊಂದು ಖಿನ್ನತೆಗೆ ಒಳಗಾಗಿ ಯುವತಿಯೋರ್ವಳು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸಂಕೋನಟ್ಟಿ ಗ್ರಾಮದ ಸ್ವಪ್ನಾ ಸುಭಾಷ ಹಿಪ್ಪರಗಿ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಂಕೋನಟ್ಟಿ ಗ್ರಾಮದ ಸುನೀಲ ಅಣ್ಣಪ್ಪ ಧರಿಗೌಡ ಕೈ ಹಿಡಿದು ಎಳೆದಾಡಿದ ಯುವಕ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಘಟನೆ ವಿವರ : ಸುನೀಲ ಧರಿಗೌಡರ ಜತೆ ಸ್ವಪ್ನಾಳನ್ನು ವಿವಾಹ ಮಾಡಿಕೊಡಿ ಎಂದು ಸುನೀಲ ತಂದೆ-ತಾಯಿ ಈಚೆಗೆ ಯುವತಿಯ ಮನೆಗೆ ಬಂದು ಕೇಳಿದ್ದರು. ಮಗಳಿಗೆ ಈಗಲೇ ಮದುವೆ ಮಾಡುವುದಿಲ್ಲ ಎಂದು ಸ್ವಪ್ನಾಳ ತಂದೆ ಸುಭಾಷ ಹೇಳಿದ್ದರು. ಅದೇ ಸಿಟ್ಟಿನಲ್ಲಿ ಜ.25 ರಂದು ಜಾತ್ರೆಯಲ್ಲಿ ಸುನೀಲನು ಸ್ವಪ್ನಾಳನ್ನು ಕೈ ಹಿಡಿದು ಎಳೆದಿದ್ದ. ಇದರಿಂದ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು