3:12 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಹೀಗೊಬ್ಬಳು.. ಬಾಲೆ ಶಬರಿ!!: ಪ್ರಧಾನಿ ಮೋದಿ ಆಗಮನಕ್ಕೆ ಕಾದು ಕೂತ 3ರ ಹರೆಯದ ಪುಟಾಣಿ!; ಪಿಎಂಗೆ ಪಾಯಸದೂಟ ತಿನ್ನಿಸುವ ಆಸೆ!!

29/01/2023, 15:32

ವಿಜಯನಗರ(reportrerkarnataka.com): ಪ್ರಧಾನಿ ನರೇಂದ್ರ ಮೋದಿ ನಮ್ಮ ಮನೆಗೆ ಬಂದು ಪಾಯಸ- ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು. ಇದು ನನ್ನಾಸೆ….ಹೀಗೆಂತ ಹೇಳುತ್ತಿರುವುದು ಯಾವುದೇ ಸಚಿವ, ಶಾಸಕರು ಅಲ್ಲ, ಬದಲಿಗೆ 3ರ ಹರೆಯ ಪುಟ್ಟ ಹುಡ್ಗಿ. ವಿಜಯನಗರ ಜಿಲ್ಲೆಯ ಕೂಡ್ಲಗಿ ಪಟ್ಟಣದ ಮೂರು ವರ್ಷದ ಬಾಲೆ ಹೀಗೆ ಹೇಳುತ್ತಿರುವುದನ್ನು ಕೇಳಿದರೆ ಎಂಥವರಿಗೂ ಕೂಡ ಅಚ್ಚರಿಯಾಗಬಹುದು. ಯಾಕೆಂದರೆ ಆಕೆಗೆ ಪ್ರಧಾನಿ ಮೋದಿ ಯಾವ ಪಕ್ಷವರು ಎನ್ನುವುದು ಗೊತ್ತಿಲ್ಲ. ಅವರು ಬಾರತದ ಪ್ರಧಾನಿ ಅಂತಾನು ತಿಳಿದಿಲ್ಲ. ಆದ್ರೆ ಮೋದಿ ಅವಳಿಗೆ ಇಷ್ಟವಂತೆ. ತುಂಬಾನೆ ಇಷ್ಟವಂತೆ. ವಿಶೇಷವೆಂದರೆ ಈ ಬಾಲೆಯ ಮನೆಯಲ್ಲಿ ಟಿವಿ ಕೂಡ ಇಲ್ಲ, ಸ್ಮಾರ್ಟ್ ಫೋನ್ ಕೂಡ ಇಲ್ಲ. ಆದ್ರೆ ಪ್ರಧಾನಿ ನರೇಂದ್ರ ಮೋದಿ ಅವರ ಪರಿಚಯವಿದೆ ಆಕೆಗೆ. ನರೇಂದ್ರ ಮೋದಿ ಗೊತ್ತಾ.. ಅವರು ನಮ್ಮ ಮನಗೆ ಊಟಕ್ಕೆ ಬರಬೇಕು ಅಷ್ಟೇ.. ಮೋದಿ ಅವರೇ ನಮ್ಮ ಮನೆಗೆ ಬಂದು ಪ‍ಾಯಸ‍ಾ…ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು..ಅದು ನನ್ನಿಷ್ಟ.. ಅವರು ಬಂದೇ ಬರುತ್ತಾರೆ ಎನ್ನುತ್ತಾಳೆ ಹರಣಿ. ದಿನಕ್ಕೊಮ್ಮೆಯಾದರೂ ಮೋದಿ ಬಗ್ಗೆ ತನ್ನ ತಾಯಿ ರೇಣುಕಮ್ಮಳೊಂದಿಗೆ ವಿಚಾರಿಸುತ್ತಿರುತ್ತಾಳೆ, ಆಕೆ ತನ್ನ ಸ್ನೇಹಿತರೊಂದಿಗೆ ಆಟವಾಡುವಾಗ ಕೂಡ ಸ್ನೇಹಿತರಲ್ಲಿ ಯಾರಾದರೂ ಒಬ್ಬ ಹುಡುಗನಿಗೆ ಮೋದಿ ಅವರ ಹೆಸರನ್ನಿಡುತ್ತಾಳೆ. ಇದನ್ನ ಕಂಡ ನೆರೆ ಹೊರೆಯವರು ಬೆರಗಾಗಿದ್ದಾರೆ. ಆಟ ಆಡುವಾಗಲೂ ಕೂಡ ನರೇಂದ್ರ ಮೋದಿ ಯ ಬಗ್ಗೆ ಗುನುಗುಡುತ್ತಾಳೆ ಈ ಬಾಲೆ. ಅವರು ತುಂಬಾ ಒಳ್ಳೆಯವರು ಅದಕ್ಕೇ ನನಗಿಷ್ಟ ಎನ್ನುತ್ತಾಳೆ.


ಬಾಲೆ ಹರಣಿಯ ತಂದೆ ಎರಡು ವರ್ಷದ ಹಿದೆಯಷ್ಟೇ, ಕೋವಿಡ್ ನಲ್ಲಿ ನಿಧನರಾಗಿದ್ದಾರೆ. ತಾಯಿ ರೇಣುಕಾ ಹಾಗೂ ಇವಳ ಸಹೋದರ ಬಾಲಕ ವಿನಾಯಕ ಸೇರಿದಂತೆ, ಮೂರೇ ಮೂರು ಜನರಿರುವ ಪುಟ್ಟ ಬಡ ಕುಟುಂಬದಲ್ಲಿ ವಾಸಿಸುತ್ತಿದ್ದಾಳೆ‌. ರಾಮಾಯಣದಲ್ಲಿ ಶಬರಿ ಮಾತೆ ಶ್ರೀರಾಮನ ಆತಿಥ್ಯಕ್ಕಾಗಿ ಕಾಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು