9:29 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ…

ಇತ್ತೀಚಿನ ಸುದ್ದಿ

ಹೀಗೊಬ್ಬಳು.. ಬಾಲೆ ಶಬರಿ!!: ಪ್ರಧಾನಿ ಮೋದಿ ಆಗಮನಕ್ಕೆ ಕಾದು ಕೂತ 3ರ ಹರೆಯದ ಪುಟಾಣಿ!; ಪಿಎಂಗೆ ಪಾಯಸದೂಟ ತಿನ್ನಿಸುವ ಆಸೆ!!

29/01/2023, 15:32

ವಿಜಯನಗರ(reportrerkarnataka.com): ಪ್ರಧಾನಿ ನರೇಂದ್ರ ಮೋದಿ ನಮ್ಮ ಮನೆಗೆ ಬಂದು ಪಾಯಸ- ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು. ಇದು ನನ್ನಾಸೆ….ಹೀಗೆಂತ ಹೇಳುತ್ತಿರುವುದು ಯಾವುದೇ ಸಚಿವ, ಶಾಸಕರು ಅಲ್ಲ, ಬದಲಿಗೆ 3ರ ಹರೆಯ ಪುಟ್ಟ ಹುಡ್ಗಿ. ವಿಜಯನಗರ ಜಿಲ್ಲೆಯ ಕೂಡ್ಲಗಿ ಪಟ್ಟಣದ ಮೂರು ವರ್ಷದ ಬಾಲೆ ಹೀಗೆ ಹೇಳುತ್ತಿರುವುದನ್ನು ಕೇಳಿದರೆ ಎಂಥವರಿಗೂ ಕೂಡ ಅಚ್ಚರಿಯಾಗಬಹುದು. ಯಾಕೆಂದರೆ ಆಕೆಗೆ ಪ್ರಧಾನಿ ಮೋದಿ ಯಾವ ಪಕ್ಷವರು ಎನ್ನುವುದು ಗೊತ್ತಿಲ್ಲ. ಅವರು ಬಾರತದ ಪ್ರಧಾನಿ ಅಂತಾನು ತಿಳಿದಿಲ್ಲ. ಆದ್ರೆ ಮೋದಿ ಅವಳಿಗೆ ಇಷ್ಟವಂತೆ. ತುಂಬಾನೆ ಇಷ್ಟವಂತೆ. ವಿಶೇಷವೆಂದರೆ ಈ ಬಾಲೆಯ ಮನೆಯಲ್ಲಿ ಟಿವಿ ಕೂಡ ಇಲ್ಲ, ಸ್ಮಾರ್ಟ್ ಫೋನ್ ಕೂಡ ಇಲ್ಲ. ಆದ್ರೆ ಪ್ರಧಾನಿ ನರೇಂದ್ರ ಮೋದಿ ಅವರ ಪರಿಚಯವಿದೆ ಆಕೆಗೆ. ನರೇಂದ್ರ ಮೋದಿ ಗೊತ್ತಾ.. ಅವರು ನಮ್ಮ ಮನಗೆ ಊಟಕ್ಕೆ ಬರಬೇಕು ಅಷ್ಟೇ.. ಮೋದಿ ಅವರೇ ನಮ್ಮ ಮನೆಗೆ ಬಂದು ಪ‍ಾಯಸ‍ಾ…ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು..ಅದು ನನ್ನಿಷ್ಟ.. ಅವರು ಬಂದೇ ಬರುತ್ತಾರೆ ಎನ್ನುತ್ತಾಳೆ ಹರಣಿ. ದಿನಕ್ಕೊಮ್ಮೆಯಾದರೂ ಮೋದಿ ಬಗ್ಗೆ ತನ್ನ ತಾಯಿ ರೇಣುಕಮ್ಮಳೊಂದಿಗೆ ವಿಚಾರಿಸುತ್ತಿರುತ್ತಾಳೆ, ಆಕೆ ತನ್ನ ಸ್ನೇಹಿತರೊಂದಿಗೆ ಆಟವಾಡುವಾಗ ಕೂಡ ಸ್ನೇಹಿತರಲ್ಲಿ ಯಾರಾದರೂ ಒಬ್ಬ ಹುಡುಗನಿಗೆ ಮೋದಿ ಅವರ ಹೆಸರನ್ನಿಡುತ್ತಾಳೆ. ಇದನ್ನ ಕಂಡ ನೆರೆ ಹೊರೆಯವರು ಬೆರಗಾಗಿದ್ದಾರೆ. ಆಟ ಆಡುವಾಗಲೂ ಕೂಡ ನರೇಂದ್ರ ಮೋದಿ ಯ ಬಗ್ಗೆ ಗುನುಗುಡುತ್ತಾಳೆ ಈ ಬಾಲೆ. ಅವರು ತುಂಬಾ ಒಳ್ಳೆಯವರು ಅದಕ್ಕೇ ನನಗಿಷ್ಟ ಎನ್ನುತ್ತಾಳೆ.


ಬಾಲೆ ಹರಣಿಯ ತಂದೆ ಎರಡು ವರ್ಷದ ಹಿದೆಯಷ್ಟೇ, ಕೋವಿಡ್ ನಲ್ಲಿ ನಿಧನರಾಗಿದ್ದಾರೆ. ತಾಯಿ ರೇಣುಕಾ ಹಾಗೂ ಇವಳ ಸಹೋದರ ಬಾಲಕ ವಿನಾಯಕ ಸೇರಿದಂತೆ, ಮೂರೇ ಮೂರು ಜನರಿರುವ ಪುಟ್ಟ ಬಡ ಕುಟುಂಬದಲ್ಲಿ ವಾಸಿಸುತ್ತಿದ್ದಾಳೆ‌. ರಾಮಾಯಣದಲ್ಲಿ ಶಬರಿ ಮಾತೆ ಶ್ರೀರಾಮನ ಆತಿಥ್ಯಕ್ಕಾಗಿ ಕಾಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು