12:47 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು: ಜನ, ಜಾನುವಾರು, ಜಲಚರಗಳಿಗೆ ಕಂಟಕ; ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ

29/01/2023, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಜಿ ಅಗ್ರಹಾರ ಸಮೀಪ ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು ಬಿಟ್ಟಿದ್ದು ಹೇಮವತಿ ನದಿ ಕಲುಷಿತವಾಗಿದ್ದು ಜನ ಜಾನುವಾರುಗಳಿಗೆ ಹಾಗೂ ಜಲಚರಗಳಿಗೆ ಮಾರಕವಾಗಿದೆ. ಅಧಿಕಾರಿ ಸಿಬ್ಬಂದಿಗಳಲ್ಲಿ ವಿನಂತಿ ಜೀ ಅಗ್ರಹಾರ ಭಾಗದಿಂದ ಕೆಳಗೆ ಸಿಗಳ್ಳಿ ಚಕ್ಕುಡಿಗೆ ಅಚ್ಚರಡಿ ಭಾಗವಾಗಿ ಹರಿಯುತ್ತಿರುವ ಹೇಮಾವತಿ ನದಿ ನೀರು ಯಾರೂ ಅನಾಗರಿಕರು ರಾತ್ರಿ ಸಮಯದಲ್ಲಿ ರೋಬೆಸ್ಟ್ ಕಾಫಿ ಪಲ್ಪರ್ ಮಾಡಿ ಅದರ ಕಲುಷಿತ ನೀರನ್ನು ಹೇಮಾವತಿ ನದಿಗೆ ಹರಿಬಿಡುತ್ತಿದ್ದಾರೆ.


ಈ ನೀರನ್ನು ಕುಡಿದ ಅನೇಕ ಜಲಚರ ಪ್ರಾಣಿಗಳು, ಸಾವಿರಾರು ಜಾನುವಾರುಗಳು ಅಷ್ಟೇ ಯಾಕೆ ಮನುಷ್ಯರು ಸಹ ಈ ನೀರನ್ನು ಕುಡಿದು ಅನಾರೋಗ್ಯಕ್ಕೆ ತುತ್ತಾಗುವ ಮುಂಚೆ ತಹಸೀಲ್ದಾರರು ಇತ್ತ ಗಮನಹರಿಸಿ ಯಾರು ಇಂತ ಅನಾಗರಿಕೆ ಕೆಲಸ ಮಾಡುತ್ತೀದ್ದನೋ ಅಂಥವರಿಗೆ ಶಿಕ್ಷೆ ಕೊಡಿಸಬೇಕು. ಹೇಮಾವತಿ ನದಿಯ ದಡದ ಮೇಲೆ ನಡೆದುಕೊಂಡು ಹೋದರು ಈ ಪಲ್ಪರ್ ಘಾಟು ಬರುತ್ತಿದೆ. ನೀರು ಪೂರ್ತಿ ಕಪ್ಪು ಬಣ್ಣದಿಂದ ಕೂಡಿರುತ್ತದೆ ದಯವಿಟ್ಟು ಅಧಿಕಾರಿಗಳು ಇವತ್ತೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕೂಡಲೆ ಕ್ರಮ ಜರುಗಿಸಿ ಇಲ್ಲವಾದಲ್ಲಿ ಲಕ್ಷಾಂತರ ಜಲಚರ ಜೀವಿಗಳು ಸರ್ವ ನಾಶವಾಗುತ್ತವೆ

ಇತ್ತೀಚಿನ ಸುದ್ದಿ

ಜಾಹೀರಾತು