1:54 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು: ಜನ, ಜಾನುವಾರು, ಜಲಚರಗಳಿಗೆ ಕಂಟಕ; ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ

29/01/2023, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಜಿ ಅಗ್ರಹಾರ ಸಮೀಪ ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು ಬಿಟ್ಟಿದ್ದು ಹೇಮವತಿ ನದಿ ಕಲುಷಿತವಾಗಿದ್ದು ಜನ ಜಾನುವಾರುಗಳಿಗೆ ಹಾಗೂ ಜಲಚರಗಳಿಗೆ ಮಾರಕವಾಗಿದೆ. ಅಧಿಕಾರಿ ಸಿಬ್ಬಂದಿಗಳಲ್ಲಿ ವಿನಂತಿ ಜೀ ಅಗ್ರಹಾರ ಭಾಗದಿಂದ ಕೆಳಗೆ ಸಿಗಳ್ಳಿ ಚಕ್ಕುಡಿಗೆ ಅಚ್ಚರಡಿ ಭಾಗವಾಗಿ ಹರಿಯುತ್ತಿರುವ ಹೇಮಾವತಿ ನದಿ ನೀರು ಯಾರೂ ಅನಾಗರಿಕರು ರಾತ್ರಿ ಸಮಯದಲ್ಲಿ ರೋಬೆಸ್ಟ್ ಕಾಫಿ ಪಲ್ಪರ್ ಮಾಡಿ ಅದರ ಕಲುಷಿತ ನೀರನ್ನು ಹೇಮಾವತಿ ನದಿಗೆ ಹರಿಬಿಡುತ್ತಿದ್ದಾರೆ.


ಈ ನೀರನ್ನು ಕುಡಿದ ಅನೇಕ ಜಲಚರ ಪ್ರಾಣಿಗಳು, ಸಾವಿರಾರು ಜಾನುವಾರುಗಳು ಅಷ್ಟೇ ಯಾಕೆ ಮನುಷ್ಯರು ಸಹ ಈ ನೀರನ್ನು ಕುಡಿದು ಅನಾರೋಗ್ಯಕ್ಕೆ ತುತ್ತಾಗುವ ಮುಂಚೆ ತಹಸೀಲ್ದಾರರು ಇತ್ತ ಗಮನಹರಿಸಿ ಯಾರು ಇಂತ ಅನಾಗರಿಕೆ ಕೆಲಸ ಮಾಡುತ್ತೀದ್ದನೋ ಅಂಥವರಿಗೆ ಶಿಕ್ಷೆ ಕೊಡಿಸಬೇಕು. ಹೇಮಾವತಿ ನದಿಯ ದಡದ ಮೇಲೆ ನಡೆದುಕೊಂಡು ಹೋದರು ಈ ಪಲ್ಪರ್ ಘಾಟು ಬರುತ್ತಿದೆ. ನೀರು ಪೂರ್ತಿ ಕಪ್ಪು ಬಣ್ಣದಿಂದ ಕೂಡಿರುತ್ತದೆ ದಯವಿಟ್ಟು ಅಧಿಕಾರಿಗಳು ಇವತ್ತೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕೂಡಲೆ ಕ್ರಮ ಜರುಗಿಸಿ ಇಲ್ಲವಾದಲ್ಲಿ ಲಕ್ಷಾಂತರ ಜಲಚರ ಜೀವಿಗಳು ಸರ್ವ ನಾಶವಾಗುತ್ತವೆ

ಇತ್ತೀಚಿನ ಸುದ್ದಿ

ಜಾಹೀರಾತು