4:59 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಲೇ ಸ್ವಸ್ಥ ಸಮಾಜ ಸಾಧ್ಯ: ಶಾಸಕ ಡಾ. ಮಂಜುನಾಥ ಭಂಡಾರಿ

30/01/2023, 12:35

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಗಿಯೇ ಸಮಾಜ ಆರೋಗ್ಯಯುತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹೇಳಿದರು.

ನಗರವನ್ನು ಸ್ವಚ್ಛವಾಗಿಡುವ ಪೌರ ಕಾರ್ಮಿಕರು, ಮಳೆ ಗಾಳಿ ಲೆಕ್ಕಿಸದೇ ನಿರಂತರ ವಿದ್ಯುತ್‌ ಪೂರೈಕೆಗೆ ಶ್ರಮಿಸುವ ಲೈನ್‌ಮ್ಯಾನ್‌ಗಳು, ಸುಡುಬಿಸಿಲು ಲೆಕ್ಕಿಸದೆ ಕಾರ್ಯನಿರ್ವಹಿಸುವ ಅಂಚೆ ಬಡವಾಡೆ ಸಿಬ್ಬಂದಿ, ಸಾರಿಗೆ ಸಿಬ್ಬಂದಿ, ಸಂಚಾರ ಪೊಲೀಸರು, ಆರೋಗ್ಯ ಕಾರ್ಯಕರ್ತರು, ಸ್ಮಶಾನ ಕಾರ್ಮಿಕರು ಸೇರಿದಂತೆ ವಿವಿಧ ಶ್ರಮಿಕ ವರ್ಗದವರಿಗೆ ನಗರದಲ್ಲಿ ಭಾನುವಾರ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸದ್ದಿಲ್ಲದ ಕಾಯಕದ ಮೂಲಕವೇ ಸಮಾಜದ ಸ್ವಾಸ್ಥ್ಯ ಕಾಪಾಡುವವರಿಗೆ, ಟೀಮ್ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮವನ್ನು ‘ಶ್ರಮ ಏವ ಜಯತೇ’ ಕಾರ್ಯಕ್ರಮದಲ್ಲಿ ಹಾಡು– ನೃತ್ಯಗಳ ಮೂಲಕ ನಮನ ಸಲ್ಲಿಸಲಾಯಿತು. ಶ್ರಮ ಜೀವಿಗಳ ಸಮರ್ಪಣಾ ಭಾವದ ಬಗ್ಗೆ ಮನತುಂಬಿವಂತಹ ಹಾಡುಗಳನ್ನು ಮೈಮ್‌ ರಾಮ್‌ದಾಸ್ ಬಳಗದವರು ಪ್ರಸ್ತುತಪಡಿಸಿದರು.
ಶ್ಮಶಾನ ಕಾರ್ಮಿಕ ಪದ್ಮನಾಭ ಅಂಚನ್‌ ಕಕ್ಕೆಬೆಟ್ಟು, ಪೌರಕಾರ್ಮಿಕರಾದ ಸುಶೀಲಾ, ಒಳಚರಂಡಿ ಸ್ವಚ್ಛಗೊಳಿಸುವ ರವೀಂದ್ರ, ಬಸ್‌ ನಿರ್ವಾಹಕ ಭಗವಾನ್‌ದಾಸ್‌ ಪೂಜಾರಿ, ಸಂಚಾರ ಪೊಲೀಸ್‌ ಸಿಬ್ಬಂದಿ ಕಾಂತಿನಾಥ್‌ ಬಿ.ಎಂ. ಮತ್ತು ಯಶವಂತ್‌, ಅಂಚೆ ಬಟವಾಡೆ ಸಿಬ್ಬಂದಿ ರಾಮಚಂದ್ರ ಕಾಮತ್‌, ಲೈನ್‌ಮ್ಯಾನ್‌ ಸದಾನಂದ, ಆರೋಗ್ಯ ಸಿಬ್ಬಂದಿ ಶಿವಾನಂದ, ಖಾಸಗಿ ಬಸ್‌ ಸಿಬ್ಬಂದಿ ಉಮೇಶ್‌, ಆರೋಗ್ಯ ಸಿಬ್ಬಂದಿ ಹೇಮಲತಾ ಅಂಚನ್‌ ಅವರನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾತನಾಡಿ ‘ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಗಿಯೇ ಸಮಾಜ ಆರೋಗ್ಯಯುತವಾಗಿದೆ’ ಎಂದರು.
ಬಿಜೆಪಿ ಮುಖಂಡ ಕ್ಯಾ.ಗಣೇಶ್ ಕಾರ್ಣಿಕ್ ಮಾತನಾಡಿ, ‘ಶ್ರಮಜೀವಿಗಳು ಕೆಲಸದಲ್ಲೇ ಭಗವಂತನನ್ನು ಕಾಣುತ್ತಾರೆ. ಒಳಚರಂಡಿ ಸ್ವಚ್ಛಗೊಳಿಸುವ ಕಾರ್ಮಿಕರನ್ನು ಕಾಯಂಗೊಳಿಸದ ವ್ಯವಸ್ಥೆಯ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಂತಹ ಕಾರ್ಮಿಕರ ಬದುಕಿನಲ್ಲಿ ‌ಬೆಳಕು ತರುವುದಕ್ಕೆ ಕೈಜೋಡಿಸಬೇಕು’ ಎಂದರು.

ಎಸಿಪಿ ಗೀತಾ ಕುಲಕರ್ಣಿ ಮಾತನಾಡಿ, ಪೊಲೀಸ್ ಇಲಾಖೆಗೆ ಇಂತಹ ಕಾರ್ಯದ ಬಗ್ಗೆ ಇಂತನೆ ಬರಲಿಲ್ಲ. ಆದರೆ ಇಂತಹ ಅರ್ಥಪೂರ್ಣ ಕಾರ್ಯಕ್ಕೆ ಟೀಮ್ ಬ್ಲ್ಯಾಕ್ ಅಂಡ್ ವೈಟ್ ಧನ್ಯವಾದಿಸಿದರು. ಯುವಕರು ಸಾಮಾಜಿಕವಾಗಿ ತೊಡಗಿಸಿಕೊಳ್ಳಿ ಎಂದು ಅವರು ಹೇಳಿದರು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ.ಶಾಂತಾರಾಮ ಶೆಟ್ಟಿ, ಆಸರೆ ಫೌಂಡೇಷನ್‌ನ ಡಾ.ಆಶಾಜ್ಯೋತಿ ರೈ, ಪತ್ರಕರ್ತ ಮನೋಹರ ಪ್ರಸಾದ್, ನಿವೃತ್ತ ಸೇನಾನಿ ನಿಟ್ಟೆಗುತ್ತು ಶರತ್‌ ಭಂಡಾರಿ, ಡಾ.ಅಣ್ಣಯ್ಯ ಕುಲಾಲ್, ಬ್ರಿಜೇಶ್‌ ಚೌಟ, ಅಂಚೆ ಅಧೀಕ್ಷಕ ಶ್ರೀಹರ್ಷ, ಟೀಮ್ ಬ್ಲ್ಯಾಕ್ ಆ್ಯಂಡ್ ವೈಟ್‌ನ ಅಭಿಷೇಕ್ ಶೆಟ್ಟಿ, ಕಾರ್ತಿಕ್ ಶೆಟ್ಟಿ, ಕಿರಣ್ ದೊಂಡೋಲೆ ಇದ್ದರು.

ಚೇತನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು