12:45 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಫಾಝೀಲ್ ಕೊಲೆ ಪ್ರಕರಣ ಮರು ತನಿಖೆಯಾಗಲಿ; ಹಿಂಸೆಗೆ ಪ್ರಚೋದಿಸುವವರ ಗಡಿಪಾರು ಮಾಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಆಗ್ರಹ

30/01/2023, 17:51

ಮಂಗಳೂರು(reporterkarnataka.com) ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯ ಪ್ರಕರಣದ ಮರು ತನಿಖೆ ಮಾಡಬೇಕು. ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡುವವರನ್ನು ಕೂಡಲೇ ಗಡೀಪಾರು ಮಾಡಬೇಕು. ಹಿಂಸೆಗೆ ಪ್ರೇರೇಪಣೆ ನೀಡುವಂತಹವರಿಗೆ ಕಾನೂನು ರೀತ್ಯ ಶಿಕ್ಷೆ ಆಗಬೇಕು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕೀಯ ಲಾಭಕ್ಕಾಗಿ ಧರ್ಮಗಳ ನಡುವೆ ಅವಿಶ್ವಾಸ ಮೂಡಿಸುವ, ಕೊಲೆಗೆ ಪ್ರೇರಣೆ ನೀಡುವ ಹೇಳಿಕೆ ನೀಡುವುದು ಸಮಾಜಕ್ಕೆ ಅಪಾಯಕಾರಿ. ಇಂತಹ ಹೇಳಿಕೆ ನೀಡುವವರು ನಿಜವಾದ ದೇಶದ್ರೋಹಿಗಳು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ
ಎಲ್ಲ ಕೊಲೆ ಪ್ರಕರಣಗಳ ನೈಜ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಹೆಜ್ಜೆ ಇಡಲಾಗುತ್ತದೆ ಎಂದರು.

ಸಮಾಜವೂ ಸೌಹಾರ್ದವಾಗಿ ಇರಬೇಕು. ಯಾರದ್ದೂ ಕೂಡ ಕೊಲೆ ಆಗಬಾರದು. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದ ಯಾವುದೇ ಯುವಕರ ಕೊಲೆ, ಸಾವು ನೋವುಗಳು ಆಗದಂತಹ ಸಮಾಜ ನಿರ್ಮಾಣ ಮಾಡಬೇಕು. ರಾಜಕೀಯ ಮತ್ತು ವ್ಯಾಪಾರವೇ ಬೇರೆ, ಆದರೆ ಕೊಲೆಗೆ ಪ್ರೇರೇಪಣೆ ನೀಡುವಂತಹ ಬಹಿರಂಗ ಹೇಳಿಕೆ ನಿಜಕ್ಕೂ ಆತಂಕಕಾರಿ ಆಗಿದೆ ಎಂದು ಅವರು ನುಡಿದರು.

ಉಳ್ಳಾಲ ಕ್ಷೇತ್ರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇದ್ದಾರೆ. ಶಾಂತಿ ಕದಡುವ ಕೃತ್ಯ ನಿರಂತರ ನಡೆಯುತ್ತಲೇ ಇದೆ. ಆದರೆ ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ. ಇಂತಹ ಕೃತ್ಯಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆ ಮುಂದಾಗಬೇಕು. ಸತ್ಯಾಂಶ ಜನರಿಗೆ ಗೊತ್ತಾಗಬೇಕು. ವೀರರಾಣಿ ಅಬ್ಬಕ್ಕ, ಚರ್ಚ್, ಮಸೀದಿಗಳು ಇರುವಂತಹ ಕ್ಷೇತ್ರ ಆಗಿದೆ. ಯಾರ ನಡುವೆಯೂ ದ್ವೇಷ ಭಾವನೆ ಇಲ್ಲಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು