6:16 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್

08/07/2021, 09:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ , ಈ ಕೆರೆ ೨೭೨ ಎಕರೆ ವಿಸ್ತೀರ್ಣ ಹೊಂದಿದೆ. ಆಲವಟ್ಟ ಕೆರೆಯಿಂದ ನೀರು ಹರಿಸಲಾಗುವುದು , ಕೆರೆ ತುಂಬಿದಾಗ ಸುತ್ತಮುತ್ತಲಿನ ಗ್ರಾಮಗಳ ಚಿತ್ರಣ ಬದಲಾಗಲಿದೆ . ಅಂತರ್ಜಲ ವೃದ್ಧಿಗೊಳ್ಳುವುದರಿಂದ ಕೃಷಿ ಚಟುವಟಿಕೆ ಮರು ಜೀವ ಪಡೆದುಕೊಳ್ಳುತ್ತದೆ ಎಂದು ಹೇಳಿದರು . 

ರಾಜಕೀಯ ಉದ್ದೇಶದಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ .ನಾನೂ ಸಹ ಕೃಷಿಕನಾಗಿದ್ದು , ಕೃಷಿ ಉದ್ದೇಶಕ್ಕೆ ೧೮ ಕೊಳವೆ ಬಾವಿ ನಿರ್ಮಿಸಿ ನೀರಿನಿಂದ ವಂಚಿತನಾಗಿದ್ದೇನೆ . ಇಲ್ಲಿನ ಇದೇ ಪರಿಸ್ಥಿತಿಯಾಗಿದೆ ಎಂದು ಹೇಳಿದರು . 

ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ,  ಹಿರಿಯ ಸಹಾಯಕ ಕೃಷಿ ನಿರ್ದೇಶಕ ಎಂ. ಶ್ರೀನಿವಾಸ್ , ಪೊಲೀಸ್ ಇನ್ಸ್ ಪೆಕರ್ ಸಿ.ರವಿ ಕುಮಾರ್ , ಮುಖಂಡರಾದ ಕೆ.ಮಂಜುನಾಥರೆಡ್ಡಿ , ಮುನಿವೆಂಕಟಪ್ಪ , ರಾಮಕೃಷ್ಣಾರೆಡ್ಡಿ , ವೆಂಕಟರೆಡ್ಡಿ , ವೇಣುಗೋಪಾಲ್ , ಹರೀಶ್ ಯಾದವ್ ,  ರೈತರದ್ದು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು