12:21 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್

08/07/2021, 09:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ , ಈ ಕೆರೆ ೨೭೨ ಎಕರೆ ವಿಸ್ತೀರ್ಣ ಹೊಂದಿದೆ. ಆಲವಟ್ಟ ಕೆರೆಯಿಂದ ನೀರು ಹರಿಸಲಾಗುವುದು , ಕೆರೆ ತುಂಬಿದಾಗ ಸುತ್ತಮುತ್ತಲಿನ ಗ್ರಾಮಗಳ ಚಿತ್ರಣ ಬದಲಾಗಲಿದೆ . ಅಂತರ್ಜಲ ವೃದ್ಧಿಗೊಳ್ಳುವುದರಿಂದ ಕೃಷಿ ಚಟುವಟಿಕೆ ಮರು ಜೀವ ಪಡೆದುಕೊಳ್ಳುತ್ತದೆ ಎಂದು ಹೇಳಿದರು . 

ರಾಜಕೀಯ ಉದ್ದೇಶದಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ .ನಾನೂ ಸಹ ಕೃಷಿಕನಾಗಿದ್ದು , ಕೃಷಿ ಉದ್ದೇಶಕ್ಕೆ ೧೮ ಕೊಳವೆ ಬಾವಿ ನಿರ್ಮಿಸಿ ನೀರಿನಿಂದ ವಂಚಿತನಾಗಿದ್ದೇನೆ . ಇಲ್ಲಿನ ಇದೇ ಪರಿಸ್ಥಿತಿಯಾಗಿದೆ ಎಂದು ಹೇಳಿದರು . 

ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ,  ಹಿರಿಯ ಸಹಾಯಕ ಕೃಷಿ ನಿರ್ದೇಶಕ ಎಂ. ಶ್ರೀನಿವಾಸ್ , ಪೊಲೀಸ್ ಇನ್ಸ್ ಪೆಕರ್ ಸಿ.ರವಿ ಕುಮಾರ್ , ಮುಖಂಡರಾದ ಕೆ.ಮಂಜುನಾಥರೆಡ್ಡಿ , ಮುನಿವೆಂಕಟಪ್ಪ , ರಾಮಕೃಷ್ಣಾರೆಡ್ಡಿ , ವೆಂಕಟರೆಡ್ಡಿ , ವೇಣುಗೋಪಾಲ್ , ಹರೀಶ್ ಯಾದವ್ ,  ರೈತರದ್ದು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು