12:09 PM Thursday22 - January 2026
ಬ್ರೇಕಿಂಗ್ ನ್ಯೂಸ್
ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ…

ಇತ್ತೀಚಿನ ಸುದ್ದಿ

ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್

08/07/2021, 09:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ , ಈ ಕೆರೆ ೨೭೨ ಎಕರೆ ವಿಸ್ತೀರ್ಣ ಹೊಂದಿದೆ. ಆಲವಟ್ಟ ಕೆರೆಯಿಂದ ನೀರು ಹರಿಸಲಾಗುವುದು , ಕೆರೆ ತುಂಬಿದಾಗ ಸುತ್ತಮುತ್ತಲಿನ ಗ್ರಾಮಗಳ ಚಿತ್ರಣ ಬದಲಾಗಲಿದೆ . ಅಂತರ್ಜಲ ವೃದ್ಧಿಗೊಳ್ಳುವುದರಿಂದ ಕೃಷಿ ಚಟುವಟಿಕೆ ಮರು ಜೀವ ಪಡೆದುಕೊಳ್ಳುತ್ತದೆ ಎಂದು ಹೇಳಿದರು . 

ರಾಜಕೀಯ ಉದ್ದೇಶದಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ .ನಾನೂ ಸಹ ಕೃಷಿಕನಾಗಿದ್ದು , ಕೃಷಿ ಉದ್ದೇಶಕ್ಕೆ ೧೮ ಕೊಳವೆ ಬಾವಿ ನಿರ್ಮಿಸಿ ನೀರಿನಿಂದ ವಂಚಿತನಾಗಿದ್ದೇನೆ . ಇಲ್ಲಿನ ಇದೇ ಪರಿಸ್ಥಿತಿಯಾಗಿದೆ ಎಂದು ಹೇಳಿದರು . 

ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ,  ಹಿರಿಯ ಸಹಾಯಕ ಕೃಷಿ ನಿರ್ದೇಶಕ ಎಂ. ಶ್ರೀನಿವಾಸ್ , ಪೊಲೀಸ್ ಇನ್ಸ್ ಪೆಕರ್ ಸಿ.ರವಿ ಕುಮಾರ್ , ಮುಖಂಡರಾದ ಕೆ.ಮಂಜುನಾಥರೆಡ್ಡಿ , ಮುನಿವೆಂಕಟಪ್ಪ , ರಾಮಕೃಷ್ಣಾರೆಡ್ಡಿ , ವೆಂಕಟರೆಡ್ಡಿ , ವೇಣುಗೋಪಾಲ್ , ಹರೀಶ್ ಯಾದವ್ ,  ರೈತರದ್ದು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು