4:24 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ದೇವೇಗೌಡ ಕುಟುಂಬ ಬಗ್ಗೆ ಅವಹೇಳನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಯುವ ಜೆಡಿಎಸ್ ಪ್ರದರ್ಶನ

31/01/2023, 20:23

ಮಂಗಳೂರು(reporterkarnataka.com): ಮಾಜಿ ಪ್ರಧಾನಿ, ಜನತಾ ದಳ ಹಿರಿಯ ನಾಯಕ ಎಚ್. ಡಿ. ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ನಗರದ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಿ ಕಪ್ಪು ಬಾವುಟವನ್ನು ಪ್ರದರ್ಶಿಸಲಾಯಿತು.
ನಂತರ ಮಾತನಾಡಿದ ಅಕ್ಷಿತ್ ಸುವರ್ಣ ಅವರು,
ದೇಶದ ಪ್ರಧಾನಿ ಆಗಿ ದೇವೇಗೌಡರು ನೀಡಿರುವ ಕೊಡುಗೆಯನ್ನು ನಳಿನ್ ಮರೆತಿರಬಹುದು. ಆದರೆ, ದೇಶದ ಜನರು ಮರೆತಿಲ್ಲ. ರಾಜ್ಯದ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿರುವ ದೇವೇಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ಕುಮಾರ್ ಕಟೀಲ್ ಅವರ ವರ್ತನೆ ಖಂಡನೀಯ ಎಂದರು.
ರಾಜಕೀಯದಲ್ಲಿ ತಮ್ಮದೇ ಕೊಡುಗೆ ನೀಡಿರುವ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ವಿರುದ್ದ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ದೇವೆಗೌಡರ ಕೊಡುಗೆ ಕನಿಷ್ಠ ಒಂದು ಪಾಲು ಸೇವೆಯನ್ನು ನೀಡದ ಇವರಿಗೆ ಗೌಡರ ಕುಟುಂಬದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ನುಡಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿ ಮಾಡಿ ಅನೈತಿಕವಾಗಿ ಸರಕಾರ ರಚನೆ ಮಾಡಿದ್ದು ಬಿಟ್ಟರೆ ಇವರ ಸಾಧನೆ ಬೇರೆ ಏನು ಇಲ್ಲ. ಕೂಡಲೇ ಅವರು ದೇವೆಗೌಡರ ಕ್ಷಮೆಯನ್ನು ಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು
ಅಕ್ಷಿತ್ ಸುವರ್ಣ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಯುವ ಜಿಲ್ಲಾ ಜೆಡಿಎಸ್ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗೂ ಜಿಲ್ಲಾ ಸಂಘಟನಾ ಉಸ್ತುವಾರಿ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನಯ್, ಗೌತಮ್, ವಿನಿತ್, ರಿನಿತ್, ನಿಶಾಂತ್, ಗಗಾಣೀಶ್ ,ಪ್ರದೀಪ್ ಕೀರ್ತಿಕ್, ಪವನ್, ಧನುಷ್, ಸುಶಾಂತ್, ವಿನಯ್ ,ಜಯದೀಪ್ ಧನುಷ್ ಪೂಜಾರಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು