3:27 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ; ಅಕ್ರಮವಾಗಿ ಸಾಗಿಸುತ್ತಿದ್ದ ಬೆಲೆಬಾಳುವ ಮರ ವಶ, 3 ಮಂದಿ ಸೆರೆ

01/02/2023, 00:08

ಬೆಳ್ತಂಗಡಿ(reporterkarnataka.com): ಅಕ್ರಮವಾಗಿ ಬೆಲೆಬಾಳುವ ಮರ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಬೆಳ್ತಂಗಡಿ ತಾಲೂಕಿನ ಮೊಗ್ರುಗ್ರಾಮದ ಮುಗೇರಡ್ಕ ಎಂಬಲ್ಲಿಂದ ರಾತ್ರಿ ವೇಳೆ ದಾಳಿ ನಡೆಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಮರದ ದಿಮ್ಮಿ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂದರು ಶಾಖಾ ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿಯ ಮೇಲೆ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಅಕ್ರಮವಾಗಿ ಹೆಬ್ಬಲಸು, ಮಾವು ಹಾಗೂ ಕಾಡು ಜಾತಿ ದಿಮ್ಮಿಗಳನ್ನು ಸಾಗಣೆ ಮಾಡುತ್ತಿರುವ ಲಾರಿಯನ್ನು ಪತ್ತೆ ಹಚ್ಚಿದ್ದರು.ಲಾರಿಗೆ ಬೆಂಗಾವಲಾಗಿ ಸಂಚರಿಸುತ್ತಿದ್ದ ಪಾಣೆ ಮಂಗಳೂರಿನ ಅಬ್ಬಾಸ್, ಕಡಬ ಮರ್ದಾಳದ ಇರ್ಫಾನ್, ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿಗಳಾದ ಅಶ್ರಫ್, ರಹಿಮಾನ್ ಮರ ಕಡಿದ ಸ್ಥಳದ ವಾರೀಸುದಾರ ಮುರ ಗ್ರಾಮದ ಕೃಷ್ಣಪ್ಪ ಹಾಗೂ ಲಾರಿ ಚಾಲಕ ಬಂಟ್ವಾಳದ ಬೋಗೋಡಿ ನಿವಾಸಿ ಅಶ್ರಫ್ ಅಂಬೋನು ಅವರ ವಿರುದ್ಧ ಅರಣ್ಯ ಸಂರಕ್ಷಣೆ ಕಾಯ್ದೆಯಂತೆ ದೂರು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು