6:55 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾರ್ಕಳ: ತಮಿಳುನಾಡು ಮೂಲದ ಲಾರಿ ಚಾಲಕನ ಇರಿದು ಕೊಲೆ; ಇನ್ನೋರ್ವ ಚಾಲಕನ ಮೇಲೆ ಶಂಕೆ

01/02/2023, 09:40

ಕಾರ್ಕಳ(reporterkarnataka.com) ಲಾರಿ ಚಾಲಕನನ್ನು ಆಯುಧದಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಸಮೀಪದ ಗೇರುಬೀಜ ಪ್ಯಾಕ್ಟರಿ ಬಳಿ ನಡೆದಿದೆ.
ತಮಿಳುನಾಡು ಮೂಲದ ಮಣಿ (36) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮುಡ್ರಾಲುನ ಫ್ಯಾಕ್ಟರಿ ಗೆ ಪ್ರತಿವರ್ಷವೂ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಅದರಂತೆ ಜ.30ರಂದು ಸಂಜೆ 4:00 ಗಂಟೆಗೆ ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಸಂಜೆ 5:30 ಗಂಟೆಗೆ ಬಂದಿದ್ದು ತಡವಾದ್ದರಿಂದ ಲಾರಿಯು ಅನ್‌ಲೋಡ್ ಆಗದೇ ಫ್ಯಾಕ್ಟರಿಯ ಬಳಿ ನಿಂತುಕೊಂಡಿತ್ತು. ಲಾರಿಗಳ ಚಾಲಕ ಹಾಗೂ ಬದಲಿ ಚಾಲಕರುಗಳು ಕೂಡಾ ಅಲ್ಲಿಯೇ ಇದ್ದು ರಾತ್ರಿ 8:30 ಗಂಟೆಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರೋರ್ವರಿಗೆ ಫ್ಯಾಕ್ಟರಿಯ ಮೇಲ್ಗಡೆ ಕೆಲಸ ಮಾಡುತ್ತಿರುವಾಗ ಲಾರಿ ನಿಲ್ಲಿಸಿದ ಸ್ಥಳದಿಂದ ಜೋರಾಗಿ ಬೊಬ್ಬೆ ಕೇಳಿಸಿದ್ದು, ಅಲ್ಲಿಗೆ ಹೋಗಿ ನೋಡಿದಾಗ ಲಾರಿಯ ಚಾಲಕ ಮಣಿ (36) ಲಾರಿಯ ಎದುರುಗಡೆ ಆತನ ಕುತ್ತಿಗೆಗೆ ಶಾಲ್ ಬಿಗಿದು ಯಾವುದೋ ಆಯುಧದಿಂದ ಇರಿದು ಕೊಲೆ ಮಾಡಿರುವುದು ಕಂಡುಬಂದಿದೆ.

ಲಾರಿಯ ಇನ್ನೋರ್ವ ಚಾಲಕ ವೀರಬಾಹು ಹಾಗೂ ಮೃತ ಮಣಿ ಗಲಾಟೆ ಮಾಡಿಕೊಳ್ಳುತ್ತಿದ್ದು, ಯಾವುದೋ ಕಾರಣದಿಂದ ಲಾರಿಯ ಇನ್ನೋರ್ವ ಚಾಲಕ ವೀರಬಾಹು ಮಣಿಯನ್ನು ಕೊಲೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು