6:15 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಯುವಕನ ಶವ ಪತ್ತೆ: ಬೆಂಗಳೂರಿನ ಯುವಕನ ಅಪಹರಿಸಿ ಕೊಲೆ; ಪ್ರೇಮ ಪ್ರಕರಣ ಹತ್ಯೆಗೆ ಕಾರಣ

01/02/2023, 15:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka agnail.com

ಅಪಹರಣಕ್ಕೊಳಗಾಗಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದ ಕಂದಕದಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ಬೆಂಗಳೂರಿಗೆ ಸಾಗಿಸಲಾಗಿದೆ.
ಕೊಲೆಗೀಡಾದ ಯುವಕನನ್ನು ಬೆಂಗಳೂರಿನ ಮತ್ರಿ ಕೆರೆ ನಿವಾಸಿ ಗೋವಿಂದರಾಜು(19) ಎಂದು ಗುರುತಿಸಲಾಗಿದೆ. ಗೋವಿಂದರಾಜು ಸಂಬಂಧಿಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


ಗೋವಿಂದರಾಜು ಅವರನ್ನು ಬೆಂಗಳೂರಿನಿಂದ ಸಂಬಂಧಿಕರೇ ಅಪಹರಣ ನಡೆಸಿದ್ದರು. ಈ ಕುರಿತು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗೋವಿಂದರಾಜುಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಅಪಹರಣಕಾರರು ಗೋವಿಂದರಾಜು ಅವರನ್ನು ಕೊಲೆ ಮಾಡಿ ಮೃತದೇಹವನ್ನು ಚಾರ್ಮಾಡಿ ಘಾಟಿಯ ಪ್ರಪಾತಕ್ಕೆ ಎಸೆದಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನ ಚಾರ್ಮಾಡಿ ಘಾಟ್ಗೆ ಯಶವಂತಪುರ ಪೊಲೀಸರು ಕರೆದು ತಂದಿದ್ದರು‌.

ಏನಿದು ಪ್ರಕರಣ?: ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸಿದ್ದ. ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್, ಭರತ್ ಹಾಗೂ ಮತ್ತಿಬ್ಬರು ಆರೋಪಿಗಳು ಕಳೆದ ಸೋಮವಾರ ಮತ್ತಿಕೆರೆಯಿಂದ ಗೋವಿಂದರಾಜನನ್ನು ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ವಾಹನದಲ್ಲಿ ದೇಹ ತಂದು ಬಿಸಾಕಿ ಪರಾರಿಯಾಗಿದ್ದರು. ಕುಟುಂಬದವರು ಗೋವಿಂದರಾಜು ಕಾಣೆಯಾಗಿರುವ ಬಗ್ಗೆ ಯಶವಂತಪುರ ಠಾಣೆಗೆ ದೂರು ನೀಡಿದ್ದರು. ಕುಟುಂಬದವರಿಗೆ ಅನಿಲ್ ಕುಮಾರ್ ಮೇಲೆ ಅನುಮಾನವಿದ್ದರಿಂದ ಪೊಲೀಸರು ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಭರತ್ ಮತ್ತಿತರ ಇಬ್ಬರು ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದು ಬುಧವಾರ ಆರೋಪಿಗಳನ್ನು ಚಾರ್ಮಾಡಿ ಘಾಟಿಗೆ ಕರೆ ತಂದು ಯಶವಂತಪುರ ಠಾಣೆಯ ಸಬ್ ಇನ್ ಸ್ಪೆಕ್ಟರ್ ಮಹೇಶ್ ಅವರ ತಂಡ ಸ್ಥಳೀಯ ಸಮಾಜ ಸೇವಕರ ಜತೆ ಸೇರಿ ಮೃತದೇಹವನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು