4:48 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ವಿನ್ಯಾಸ ಅನುಮೋದನೆ ಶುಲ್ಕ ಕಡಿತ: ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಸಂತಸ

08/07/2021, 09:53

ಮಂಗಳೂರು(reporterkarnataka news):

ನಗರ ಯೋಜನಾ ವಿಭಾಗಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈಗಾಗಲೇ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆ ಶುಲ್ಕವನ್ನು ಕಡಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದರು.

ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಮನಗಂಡು ಈ ಬಗ್ಗೆ ಶುಲ್ಕವನ್ನು ಪರಿಷ್ಕರಿಸುವಂತೆ ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಸರಕಾರಕ್ಕೆ ದಿನಾಂಕ ೩೧-೦೮-೨೦೨೦ ನಿರ್ಣಯಿಸಿ ಪತ್ರ ಬರೆಯಲಾಗಿತ್ತು. ಈ ಮನವಿಯನ್ನು ಪರಿಗಣಿಸಿ 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಜನಸಾಮಾನ್ಯರ ಸಮಸ್ಯೆಯನ್ನು ಪರಿಗಣಿಸಿ ಶುಲ್ಕ ಕಡಿಮೆಗೊಳಿಸಿ ಆದೇಶ ನೀಡಿದ್ದಾರೆ. ಆದೇಶವನ್ನು ಹೊರಡಿಸುವಲ್ಲಿ ಕಾರಣೀಕರ್ತರಾದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಅವರಿಗೆ ಧನ್ಯವಾದಗಳು ಎಂದು ಮಿಜಾರ್ ನುಡಿದರು.ಮುಡಾ ಕಮಿಷನರ್ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು