12:47 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಅಥಣಿಯ ಹಲ್ಯಾಳ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ

01/02/2023, 22:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ಹಲ್ಯಾಳ ಗ್ರಾಮದಿಂದ ರೆಡ್ಡರಹಟ್ಟಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮದ ಬಿಜೆಪಿ ಯುವ ಮುಖಂಡರಾದ ಸಂಗಮೇಶ್ ಇಂಗಳಿ ಅವರ ಸತತ ಪ್ರಯತ್ನದಿಂದ ಗ್ರಾಮದಲ್ಲಿ ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಗ್ರಾಮದ ಅಭಿವೃದ್ಧಿಗೆ ಬಹು ಮುಖ್ಯ ಪಾತ್ರ ವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಹಲ್ಯಾಳ ಗ್ರಾಮದಲ್ಲಿ ಎಲ್ಲಾ ಪ್ರಮುಖ ಕಾಮಗಾರಿಗಳನ್ನು ಕಾರ್ಯಗತಿಗೆ ತರಲಾಗಿದೆ. ಬಹುದಿನಗಳಿಂದ ಗ್ರಾಮಕ್ಕೆ ಒಂದು ಪದವಿಪೂರ್ವ ಮಹಾವಿದ್ಯಾಲಯದ ಅವಶ್ಯಕತೆ ಇದೆ ಎಂದು ಮಾಹಿತಿ ಇದ್ದು ಈಗಾಗಲೇ 11 ಕಾಲೇಜುಗಳ ಮುಂಜರಾತಿಗೆ ಸರಕಾರಕ್ಕೆ ಮನವಿಯನ್ನ ಸಲ್ಲಿಸಿದ್ದೇನೆ. ಮುಂಬರುವ ದಿನಗಳಲ್ಲಿ ಹಲ್ಯಾಳ ಗ್ರಾಮಕ್ಕೆ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದಕಣ್ಣ ಸೇಗುಣಿಸಿ, ಊರಿನ ಪ್ರಮುಖರು ಕುಮಾರಗೌಡ ಪಾಟೀಲ, ಸುರೇಶ್ ವಾಡೆದ, ರಾವಸಾಬ ಪಾಟೀಲ, ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ ರಮೇಶ್ ಗುಮಚಿ, ಅಣ್ಣಪ್ಪ ಬಾಗಿ, ಮಾಂತೇಶ ಇಂಗಳಿ, ಸಂತೋಷ್ ಕಾಂಬಳೆ ರಾಹುಲ್ ಮಾದರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು