5:49 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಅಥಣಿಯ ಹಲ್ಯಾಳ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ

01/02/2023, 22:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ಹಲ್ಯಾಳ ಗ್ರಾಮದಿಂದ ರೆಡ್ಡರಹಟ್ಟಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮದ ಬಿಜೆಪಿ ಯುವ ಮುಖಂಡರಾದ ಸಂಗಮೇಶ್ ಇಂಗಳಿ ಅವರ ಸತತ ಪ್ರಯತ್ನದಿಂದ ಗ್ರಾಮದಲ್ಲಿ ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಗ್ರಾಮದ ಅಭಿವೃದ್ಧಿಗೆ ಬಹು ಮುಖ್ಯ ಪಾತ್ರ ವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಹಲ್ಯಾಳ ಗ್ರಾಮದಲ್ಲಿ ಎಲ್ಲಾ ಪ್ರಮುಖ ಕಾಮಗಾರಿಗಳನ್ನು ಕಾರ್ಯಗತಿಗೆ ತರಲಾಗಿದೆ. ಬಹುದಿನಗಳಿಂದ ಗ್ರಾಮಕ್ಕೆ ಒಂದು ಪದವಿಪೂರ್ವ ಮಹಾವಿದ್ಯಾಲಯದ ಅವಶ್ಯಕತೆ ಇದೆ ಎಂದು ಮಾಹಿತಿ ಇದ್ದು ಈಗಾಗಲೇ 11 ಕಾಲೇಜುಗಳ ಮುಂಜರಾತಿಗೆ ಸರಕಾರಕ್ಕೆ ಮನವಿಯನ್ನ ಸಲ್ಲಿಸಿದ್ದೇನೆ. ಮುಂಬರುವ ದಿನಗಳಲ್ಲಿ ಹಲ್ಯಾಳ ಗ್ರಾಮಕ್ಕೆ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದಕಣ್ಣ ಸೇಗುಣಿಸಿ, ಊರಿನ ಪ್ರಮುಖರು ಕುಮಾರಗೌಡ ಪಾಟೀಲ, ಸುರೇಶ್ ವಾಡೆದ, ರಾವಸಾಬ ಪಾಟೀಲ, ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ ರಮೇಶ್ ಗುಮಚಿ, ಅಣ್ಣಪ್ಪ ಬಾಗಿ, ಮಾಂತೇಶ ಇಂಗಳಿ, ಸಂತೋಷ್ ಕಾಂಬಳೆ ರಾಹುಲ್ ಮಾದರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು