3:33 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ನಿಧಿ: 2 ಕೋಟಿಯಿಂದ ಕನಿಷ್ಢ 10 ಕೋಟಿಗೆ ಹೆಚ್ಚಿಸಲು ಸಿಎಂಗೆ ಆಗ್ರಹ

02/02/2023, 14:34

ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಶಾಸಕರುಗಳ ಪ್ರದೇಶಾಭಿವೃದ್ಧಿ ನಿಧಿಗೆ ನೀಡಲಾಗುತ್ತಿರುವ 2 ಕೋಟಿ ಅನುದಾನವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರುಗಳಿಗೆ ಬಿಡುಗಡೆ ಮಾಡುತ್ತಿರುವ ಕ್ಷೇತ್ರಾಭಿವೃದ್ಧಿ ನಿಧಿಯನ್ನು 2 ಕೋಟಿಯಿಂದ 25 ಕೋಟಿಗಳಿಗೆ ಹೆಚ್ಚಿಸುವಂತೆ ಸರಕಾರವರವನ್ನು ಒತ್ತಾಯಿಸಿದ್ದರು. ಪ್ರತಿಯೊಬ್ಬ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ 350 ರಿಂದ 400 ಗ್ರಾಮ ಪಂಚಾಯಿತಿಗಳು ಬರುತ್ತಿದ್ದು,ತಾವುಗಳು ಪ್ರವಾಸ ಮಾಡುವಂತಹ ಸಮಯದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಶಾಲಾ ಕೊಠಡಿ, ರಸ್ತೆ ಮತ್ತು ಚರಂಡಿ ಕಾಮಗಾರಿ, ವಿದ್ಯುತ್ ದೀಪಗಳು, ಕುಡಿಯುವ ನೀರು ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸುತ್ತಿರುತ್ತಾರೆ. ಆದರೆ ಸರ್ಕಾರ ಪ್ರತಿಯೊಬ್ಬ ಶಾಸಕರುಗಳಿಗೆ ಬಿಡುಗಡೆ ಮಾಡುವಂತಹ 2 ಕೋಟಿಗಳ ಕ್ಷೇತ್ರಾಭಿವೃದ್ಧಿ ನಿಧಿ ಯಾವುದಕ್ಕೂ ಸಾಲದ್ದಾಗಿದ್ದು, ಈ ಮೊತ್ತದಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಈ ಸಂಬಂಧವಾಗಿ ಕ್ಷೇತ್ರಾಭಿವೃದ್ಧಿ ನಿಧಿಯನ್ನು ಹೆಚ್ಚಿಸುವಂತೆ ಹಲವು ಬಾರಿ ಮನವಿ ಮಾಡಿರುವುದಾಗಿ ಶಾಸಕರುಗಳು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಎಲ್ಲಾ 25 ಜನ
ಜನಪ್ರತಿನಿಧಿಗಳು ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದು ಗ್ರಾಮಗಳ ಜೊತೆ ನಮ್ಮ ಹೆಚ್ಚಿನ ಒಡನಾಟ ಇರುವುದರಿಂದ ಜನರ ಮೂಲಭೂತ ಆವಶ್ಯಕತೆಗಳನ್ನು ಈಡೇರಿಸುವ ಬಗ್ಗೆ ನಾವು ಹೆಚ್ಚು ಗಮನಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಸಿರುತ್ತಾರೆ.

ಆದ ಕಾರಣ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳಿಗೆ ಸೀಮಿತವಾಗಿ ಈಗ ನೀಡುತ್ತಿರುವ ಕ್ಷೇತ್ರಾಭಿವೃದ್ದಿ 2 ಕೋಟಿ ಅನುದಾನವನ್ನು ಕನಿಷ್ಠ 10 ಕೋಟಿಗಳಿಗೆ ಹೆಚ್ಚಿಸುವ ಬಗ್ಗೆ ಈ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಶಿಫಾರಸ್ಸು ಮಾಡುವಂತೆ ಸಚಿವರು ಹಾಗೂ ವಿಧಾನ ಪರಿಷತ್ತಿನ ¸ ಸಭಾ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮನವಿ ಮಾಡಿದ್ದಾರೆ.
ಶಾಸಕರುಗಳಾದ ಮಂಜುನಾಥ ಭಂಡಾರಿ, ದಿನೇಶ್ ಗೂಳಿಗೌಡ, ಎಸ್. ರವಿ, ಶರಣ್ ಗೌಡ ಪಾಟೀಲ್,ಸುನೀಲ್ ಗೌಡ ಪಾಟೀಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು