11:10 PM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ನಿಧಿ: 2 ಕೋಟಿಯಿಂದ ಕನಿಷ್ಢ 10 ಕೋಟಿಗೆ ಹೆಚ್ಚಿಸಲು ಸಿಎಂಗೆ ಆಗ್ರಹ

02/02/2023, 14:34

ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಶಾಸಕರುಗಳ ಪ್ರದೇಶಾಭಿವೃದ್ಧಿ ನಿಧಿಗೆ ನೀಡಲಾಗುತ್ತಿರುವ 2 ಕೋಟಿ ಅನುದಾನವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರುಗಳಿಗೆ ಬಿಡುಗಡೆ ಮಾಡುತ್ತಿರುವ ಕ್ಷೇತ್ರಾಭಿವೃದ್ಧಿ ನಿಧಿಯನ್ನು 2 ಕೋಟಿಯಿಂದ 25 ಕೋಟಿಗಳಿಗೆ ಹೆಚ್ಚಿಸುವಂತೆ ಸರಕಾರವರವನ್ನು ಒತ್ತಾಯಿಸಿದ್ದರು. ಪ್ರತಿಯೊಬ್ಬ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ 350 ರಿಂದ 400 ಗ್ರಾಮ ಪಂಚಾಯಿತಿಗಳು ಬರುತ್ತಿದ್ದು,ತಾವುಗಳು ಪ್ರವಾಸ ಮಾಡುವಂತಹ ಸಮಯದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಶಾಲಾ ಕೊಠಡಿ, ರಸ್ತೆ ಮತ್ತು ಚರಂಡಿ ಕಾಮಗಾರಿ, ವಿದ್ಯುತ್ ದೀಪಗಳು, ಕುಡಿಯುವ ನೀರು ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸುತ್ತಿರುತ್ತಾರೆ. ಆದರೆ ಸರ್ಕಾರ ಪ್ರತಿಯೊಬ್ಬ ಶಾಸಕರುಗಳಿಗೆ ಬಿಡುಗಡೆ ಮಾಡುವಂತಹ 2 ಕೋಟಿಗಳ ಕ್ಷೇತ್ರಾಭಿವೃದ್ಧಿ ನಿಧಿ ಯಾವುದಕ್ಕೂ ಸಾಲದ್ದಾಗಿದ್ದು, ಈ ಮೊತ್ತದಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಈ ಸಂಬಂಧವಾಗಿ ಕ್ಷೇತ್ರಾಭಿವೃದ್ಧಿ ನಿಧಿಯನ್ನು ಹೆಚ್ಚಿಸುವಂತೆ ಹಲವು ಬಾರಿ ಮನವಿ ಮಾಡಿರುವುದಾಗಿ ಶಾಸಕರುಗಳು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಎಲ್ಲಾ 25 ಜನ
ಜನಪ್ರತಿನಿಧಿಗಳು ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದು ಗ್ರಾಮಗಳ ಜೊತೆ ನಮ್ಮ ಹೆಚ್ಚಿನ ಒಡನಾಟ ಇರುವುದರಿಂದ ಜನರ ಮೂಲಭೂತ ಆವಶ್ಯಕತೆಗಳನ್ನು ಈಡೇರಿಸುವ ಬಗ್ಗೆ ನಾವು ಹೆಚ್ಚು ಗಮನಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಸಿರುತ್ತಾರೆ.

ಆದ ಕಾರಣ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳಿಗೆ ಸೀಮಿತವಾಗಿ ಈಗ ನೀಡುತ್ತಿರುವ ಕ್ಷೇತ್ರಾಭಿವೃದ್ದಿ 2 ಕೋಟಿ ಅನುದಾನವನ್ನು ಕನಿಷ್ಠ 10 ಕೋಟಿಗಳಿಗೆ ಹೆಚ್ಚಿಸುವ ಬಗ್ಗೆ ಈ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಶಿಫಾರಸ್ಸು ಮಾಡುವಂತೆ ಸಚಿವರು ಹಾಗೂ ವಿಧಾನ ಪರಿಷತ್ತಿನ ¸ ಸಭಾ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮನವಿ ಮಾಡಿದ್ದಾರೆ.
ಶಾಸಕರುಗಳಾದ ಮಂಜುನಾಥ ಭಂಡಾರಿ, ದಿನೇಶ್ ಗೂಳಿಗೌಡ, ಎಸ್. ರವಿ, ಶರಣ್ ಗೌಡ ಪಾಟೀಲ್,ಸುನೀಲ್ ಗೌಡ ಪಾಟೀಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು