6:40 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಕಾರಿಗೆ ಬೆಂಕಿ: ತುಂಬು ಗರ್ಭಿಣಿ ಪತ್ನಿ ಹಾಗೂ ಪತಿ ಸಜೀವ ದಹನ; ಹೆರಿಗೆ ಆಸ್ಪತ್ರೆಗೆ ಹೋಗುತ್ತಿದ್ದಾಗ ಎದುರಾದ ಜವರಾಯ

02/02/2023, 21:57

ಕಣ್ಣೂರು(reporterkarnataka.com): ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿದ ಪರಿಣಾಮ ತುಂಬು ಗರ್ಭಿಣಿ ಪತ್ನಿ ಹಾಗೂ ಪತಿ ಜೀವಂತ ದಹಿಸಿದ ಹೃದಯವಿದ್ರಾವಕ ಘಟನೆಯ ನೆರೆಯ ಕೇರಳದ ಕಣ್ಣೂರು ಸಾಕ್ಷಿಯಾಯಿತು.

ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಕಾರು ಹೊತ್ತಿ ಉರಿದು ಗರ್ಭಿಣಿ ಹಾಗೂ ಆಕೆ ಪತಿ ಸಜೀವ ದಹನವಾಗಿದ್ದಾರೆ. ಗರ್ಭಿಣಿ ರೀಶಾ (26) ಹಾಗೂ ಆಕೆ ಪತಿ ಪ್ರಿಜಿತ್​(35) ಮೃತರು. ಜಿಲ್ಲಾಸ್ಪತ್ರೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಮಾರುತಿ ಎಕ್ಸ್ ಪ್ರೆಸ್ಸೋ 2020 ರ ಮಾಡೆಲ್ ಆಗಿದ್ದು, 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದು, ಮಗು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ದಂಪತಿಗೆ ಕಾರಿನ ಬಾಗಿಲು ತೆಗೆಯಲು ಸಾಧ್ಯವಾಗದೇ ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಯಲ್ಲಿ ಪ್ರಿಜೀತ್​ ಹಾಗೂ ರೀಶಾ ಮೃತಪಟ್ಟಿದ್ದರು ಎನ್ನಲಾಗಿದೆ.

ಘಟನೆ ನಡೆಯುತ್ತಿದ್ದ ವೇಳೆಯಲ್ಲಿ ಅಲ್ಲೇ ಇದ್ದ ಸ್ಥಳೀಯರು ದಂಪತಿಯನ್ನು ರಕ್ಷಿಸಲು ಯತ್ನಿಸಿದರಾದರೂ, ಅದು ಸಾಧ್ಯವಾಗಲಿಲ್ಲ. ಸಜೀವ ದಹನದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಬೆಂಕಿಯ ಒಳಗೆ ಸಿಕ್ಕು ಹಾಕಿಕೊಂಡು ದಂಪತಿ ಕಿರುಚಾಡುವ ದೃಶ್ಯಗಳು ಕರಳು ಹಿಂಡುವಂತಿದೆ. ಅನೇಕರು ಕಾರಿನ ಸಮೀಪ ಬಂದರಾದರೂ ಕಾರು ಸ್ಫೋಟಗೊಳ್ಳುವ ಅಪಾಯದಿಂದ ಯಾರೂ ಕೂಡ ಗಾಜು ಒಡೆಯಲು ಹೆದರಿಕೊಂಡಿದ್ದರು.

ಬೆಂಕಿ ಹೊತ್ತಿದ್ದ ವೇಳೆ ಎಲ್ಲರೂ ಅಸಹಾಯಕರಾಗಿದ್ದೆವು. ಕಾರಿನ ಮುಂಭಾಗವು ನೋಡ ನೋಡುತ್ತಿದ್ದಂತೆಯೇ ಬೆಂಕಿಗೆ ಆಹುತಿಯಾಗಿತ್ತು. ಕಾರಿನ ಇಂಧನ​ ಟ್ಯಾಂಕ್​ ಯಾವಾಗ ಬೇಕಿದ್ದರೂ ಸ್ಫೋಟಗೊಳ್ಳಬಹುದಿತ್ತು. ಹೀಗಾಗಿ ನಮಗೆ ದಂಪತಿ ಉಳಿಸಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.
ಕಾರಿನಲ್ಲಿದ್ದ ಉಳಿದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕಾರು ಬೆಂಕಿಗೆ ಆಹುತಿಯಾದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಕಣ್ಣೂರು ನಗರ ಪೊಲೀಸ್​ ಕಮಿಷನರ್​​ ಅಜಿತ್​ ಕುಮಾರ್​ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು