5:51 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಾರಿಗೆ ಡಿಕ್ಕಿ ಹೊಡೆದು ಮಾಯವಾಗಿದ್ದ ಶುನಕ ಅಲ್ಲಿತ್ತು!: ಬಂಪರ್ ಒಳಗೆ ಬರೋಬ್ಬರಿ 70 ಕಿಮೀ ಶ್ವಾನ ಪ್ರಯಾಣ!!

03/02/2023, 10:36

ಪುತ್ತೂರು(reporter Karnataka.com): ನಾಯಿಯೊಂದು ಕಾರಿನ ಬಂಪರಿನಲ್ಲಿ ಬರೋಬ್ಬರಿ 70 ಕಿಮೀ ಪ್ರಯಾಣಿಸಿದ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ನಡೆದಿದೆ. ವಿಚಿತ್ರವೆಂದರೆ ನಾಯಿಗೆ ಯಾವುದೇ ಗಾಯಗಳಾಗದೆ ಸುರಕ್ಷಿತವಾಗಿತ್ತು.

ಪುತ್ತೂರು ಸಮೀಪದ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿತ್ತು. ಸುಬ್ರಹ್ಮಣ್ಯ ಅವರು ತಕ್ಷಣವೇ ಕಾರನ್ನು ನಿಲ್ಲಿಸಿ ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ನಾಯಿ ಮಂಗಮಾಯ!. ಕಾರಿಗೆ ಡಿಕ್ಕಿ ಹೊಡೆದ ನಾಯಿ ಅಲ್ಲಿಂದ ಎಲ್ಲಿ ಹೋಯಿತು ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು. ನಂತರ ಅವರು ಕಾರು ಚಲಾಯಿಸಿಕೊಂಡು ಮನೆಯತ್ತ ಸಾಗಿದರು.

ನೇರವಾಗಿ ಕಬಕದ ತನ್ನ ಮನೆಗೆ ಬಂದ ಸುಬ್ರಹ್ಮಣ್ಯ ದಂಪತಿ ಕಾರನ್ನು ಪರಿಶೀಲಿಸಿದಾಗ ಬಂಪರ್ ನ ಗ್ರಿಲ್ ತುಂಡಾಗಿರುವುದು ಗಮನಿಸಿದರು. ತುಂಡಾದ ಗ್ರಿಲ್ ಸಂದಿನಿಂದ ಬಂಪರೊಳಗೆ ನಾಯಿ ಇರುವುದು ಕಂಡು ಬಂತು. 70 ಕಿಲೋಮೀಟರ್ ಹಿಂದೆ ಕಾರಿಗೆ ಡಿಕ್ಕಿ ಹೊಡೆದ ನಾಯಿ ಅಲ್ಲಿತ್ತು.


ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್ ಗೆ ತೆರಳಿದ ಸುಬ್ರಹ್ಮಣ್ಯ ಅವರು ನಾಯಿಯನ್ನು ಹೊರ ತೆಗೆಯಲು ವಿನಂತಿಸಿದರು. ಗ್ಯಾರೇಜ್ ಮಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಪರ್ ಬಿಚ್ಚಿ ನಾಯಿಯನ್ನು ಸುರಕ್ಷಿತವಾಗಿ ಕಾರಿಂದ ಹೊರಗೆ ಬರುವಂತೆ ಮಾಡಲಾಯಿತು. ಸುಮಾರು 70 ಕಿಲೊಮೀಟರ್ ವರೆಗೆ ಕಾರಿನ ಬಂಪರ್ ಒಳಗೇ ಇದ್ದ ನಾಯಿ ಆರಾಮವಾಗಿ ಹೊರಗೆ ಬಂತು. ನಾಯಿಗೆ ಯಾವುದೇ ಗಾಯಗಳಾಗಿಲ್ಲ ಎನ್ನುವುದು ಸಮಾಧಾನದ ವಿಷಯ.

ಇತ್ತೀಚಿನ ಸುದ್ದಿ

ಜಾಹೀರಾತು