3:30 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಾರಿಗೆ ಡಿಕ್ಕಿ ಹೊಡೆದು ಮಾಯವಾಗಿದ್ದ ಶುನಕ ಅಲ್ಲಿತ್ತು!: ಬಂಪರ್ ಒಳಗೆ ಬರೋಬ್ಬರಿ 70 ಕಿಮೀ ಶ್ವಾನ ಪ್ರಯಾಣ!!

03/02/2023, 10:36

ಪುತ್ತೂರು(reporter Karnataka.com): ನಾಯಿಯೊಂದು ಕಾರಿನ ಬಂಪರಿನಲ್ಲಿ ಬರೋಬ್ಬರಿ 70 ಕಿಮೀ ಪ್ರಯಾಣಿಸಿದ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ನಡೆದಿದೆ. ವಿಚಿತ್ರವೆಂದರೆ ನಾಯಿಗೆ ಯಾವುದೇ ಗಾಯಗಳಾಗದೆ ಸುರಕ್ಷಿತವಾಗಿತ್ತು.

ಪುತ್ತೂರು ಸಮೀಪದ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿತ್ತು. ಸುಬ್ರಹ್ಮಣ್ಯ ಅವರು ತಕ್ಷಣವೇ ಕಾರನ್ನು ನಿಲ್ಲಿಸಿ ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ನಾಯಿ ಮಂಗಮಾಯ!. ಕಾರಿಗೆ ಡಿಕ್ಕಿ ಹೊಡೆದ ನಾಯಿ ಅಲ್ಲಿಂದ ಎಲ್ಲಿ ಹೋಯಿತು ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು. ನಂತರ ಅವರು ಕಾರು ಚಲಾಯಿಸಿಕೊಂಡು ಮನೆಯತ್ತ ಸಾಗಿದರು.

ನೇರವಾಗಿ ಕಬಕದ ತನ್ನ ಮನೆಗೆ ಬಂದ ಸುಬ್ರಹ್ಮಣ್ಯ ದಂಪತಿ ಕಾರನ್ನು ಪರಿಶೀಲಿಸಿದಾಗ ಬಂಪರ್ ನ ಗ್ರಿಲ್ ತುಂಡಾಗಿರುವುದು ಗಮನಿಸಿದರು. ತುಂಡಾದ ಗ್ರಿಲ್ ಸಂದಿನಿಂದ ಬಂಪರೊಳಗೆ ನಾಯಿ ಇರುವುದು ಕಂಡು ಬಂತು. 70 ಕಿಲೋಮೀಟರ್ ಹಿಂದೆ ಕಾರಿಗೆ ಡಿಕ್ಕಿ ಹೊಡೆದ ನಾಯಿ ಅಲ್ಲಿತ್ತು.


ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್ ಗೆ ತೆರಳಿದ ಸುಬ್ರಹ್ಮಣ್ಯ ಅವರು ನಾಯಿಯನ್ನು ಹೊರ ತೆಗೆಯಲು ವಿನಂತಿಸಿದರು. ಗ್ಯಾರೇಜ್ ಮಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಪರ್ ಬಿಚ್ಚಿ ನಾಯಿಯನ್ನು ಸುರಕ್ಷಿತವಾಗಿ ಕಾರಿಂದ ಹೊರಗೆ ಬರುವಂತೆ ಮಾಡಲಾಯಿತು. ಸುಮಾರು 70 ಕಿಲೊಮೀಟರ್ ವರೆಗೆ ಕಾರಿನ ಬಂಪರ್ ಒಳಗೇ ಇದ್ದ ನಾಯಿ ಆರಾಮವಾಗಿ ಹೊರಗೆ ಬಂತು. ನಾಯಿಗೆ ಯಾವುದೇ ಗಾಯಗಳಾಗಿಲ್ಲ ಎನ್ನುವುದು ಸಮಾಧಾನದ ವಿಷಯ.

ಇತ್ತೀಚಿನ ಸುದ್ದಿ

ಜಾಹೀರಾತು