1:18 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ: ಚಿತ್ರಾಪುರ ದೇಗುಲದ ಕಾಮಗಾರಿ ವೀಕ್ಷಣೆ

03/02/2023, 18:58

ಸುರತ್ಕಲ್(reporterkarnataka.com):
ಸುಮಾರು 20 ಲಕ್ಷ ರೂಪಾಯಿ ಅನುದಾನದಲ್ಲಿ ಬೈಕಂಪಾಡಿ ಮೊಗವೀರ ಮಹಾಸಭಾ (ರಿ) ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾಮಗಾರಿಗಳನ್ನು ಶಾಸಕರು ವೀಕ್ಷಿಸಿ ಪ್ರಮುಖರೊಂದಿಗೆ ಸಮಾಲೋಚಿಸಿದರು.


ದೇವಳದಲ್ಲಿ ಚಿತ್ರಾಪುರ ಮಠಾಧೀಶರಾದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸ್ಥಳೀಯ ಕಾರ್ಪೊರೇಟರ್ ಸುಮಿತ್ರಾ, ಸುನಿತಾ, ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮುಖಂಡರಾದ ಅರವಿಂದ್ ಬೆಂಗ್ರೆ, ಬೂತ್ ಅಧ್ಯಕ್ಷರಾದ ಸುನಿತ್ ಚಿತ್ರಾಪುರ, ಶಕ್ತಿಕೇಂದ್ರ ಪ್ರಮುಖರಾದ ಗಿರೀಶ್ ಬೈಕಂಪಾಡಿ, ಬೈಕಂಪಾಡಿ ಮೋಗವೀರ ಮಹಾಸಭಾ ಅಧ್ಯಕ್ಷರಾದ ವಸಂತ ಬೈಕಂಪಾಡಿ, ಗುರಿಕಾರರು, ಪೂಜಾರಿಗಳು, ಆಡಳಿತ ಸಮಿತಿ ಸದಸ್ಯರು, ಅಂಗಸಂಸ್ಥೆಗಳು,ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು