5:34 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಬಂಧನ; ಜಾಮೀನು

04/02/2023, 17:11

ಮಂಗಳೂರು(reporterkarnataka.com) : ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾರು ಚಲಾಯಿಸುತ್ತಿದ್ದ ಪ್ರಸಿದ್ಧ ಯೂಟ್ಯೂಬರ್ ಅರ್ಪಿತ್ ಬಂಧನವಾಗಿದ್ದು, ಜಾಮೀನು ಕೂಡ ದೊರೆತಿದೆ.

ಕಳೆದ ಮಂಗಳವಾರ ಮುಲ್ಕಿ ಸಮೀಪ ನಡೆದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದ್ದು, ಕರಾವಳಿಯ ಖ್ಯಾತ ಯೂಟ್ಯೂಬರ್ ಅರ್ಪಿತ್ ಎಂಬವರನ್ನು
ಪೋಲಿಸರು ಬಂಧಿಸಿದ್ದರು.
ಬಂಧಿತ ಆರೋಪಿ ಯೂಟ್ಯೂಬರ್ ಆಗಿದ್ದು,
ಹಳೆಯಂಗಡಿ ಸಮೀಪದ ಇಂದ್ರನಗರ ನಿವಾಸಿ.
ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದರು.
ಮಧ್ಯ ಪ್ರದೇಶದ ಇಂದೋರ್ ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯ ಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು.‌ಈ ವೇಳೆ ಹೆದ್ದಾರಿಯಲ್ಲಿ ಉಡುಪು ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತ ರಭಸಕ್ಕೆ ಬಬುಲು ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಇನ್ನೋರ್ವ ಅಚಲ್ ಸಿಂಗ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇನ್ನೋರ್ವ ಗಾಯಾಳು ಅನಿಶ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಮೂವರಿಗೆ ಡಿಕ್ಕಿ ಹೊಡೆದ ಕಾರು ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು