3:38 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕರಾವಳಿ ಪ್ರಜಾಧ್ವನಿ ಯಶಸ್ವಿಗೆ ಸಂಯೋಜಕರ ನೇಮಕ: ಶಾಸಕ ಡಾ. ಮಂಜುನಾಥ ಭಂಡಾರಿ

05/02/2023, 12:45

ಮಂಗಳೂರು(reporterkarnataka.com): ಪ್ರಜಾಧ್ವನಿಯ ಯಶಸ್ವಿಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಇಂದಿನಿಂದ (ಜ.5) ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯಾತ್ರೆಯ ಸಂಘಟನೆಗೆ ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರನ್ನು ಜಿಲ್ಲಾ ಸಂಯೋಜಕರಾಗಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಅವರನ್ನು ಸಹ ಸಂಯೋಜಕಿಯಾಗಿ ನೇಮಕ ಮಾಡಲಾಗಿದೆ.

ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶಿಫಾರಸ್ಸು ಹಾಗೂ ಕರಾವಳಿ ಕರ್ನಾಟಕದ ಸಂಯೋಜಕರಾದ ಬಿ.ಕೆ. ಹರಿಪ್ರಸಾದ್ ಅವರ ಅನುಮತಿ ಮೇರೆಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಉಸ್ತುವಾರಿ ನೇಮಕ ಮಾಡಲಾಗಿದೆ. ಸುಳ್ಯ ಕ್ಷೇತ್ರಕ್ಕೆ ಶಕುಂತಳಾ ಶೆಟ್ಟಿ, ಪುತ್ತೂರಿಗೆ ಜೆ.ಆರ್. ಲೋಬೊ, ಬೆಳ್ತಂಗಡಿಗೆ ಶಶಿಧರ್ ಹೆಗ್ಡೆ, ಬಂಟ್ವಾಳಕ್ಕೆ ಬಿ. ಇಬ್ರಾಹಿಂ, ಮೂಡುಬಿದಿರೆಗೆ ಮಹಾಬಲ ಮಾರ್ಲ, ಮಂಗಳೂರು ಕ್ಷೇತ್ರಕ್ಕೆ ಕವಿತಾ ಸನಿಲ್, ಮಂಗಳೂರು ದಕ್ಷಿಣಕ್ಕೆ ಮೊಯಿದ್ದೀನ್ ಬಾವಾ ಹಾಗೂ ಮಂಗಳೂರು ಉತ್ತರಕ್ಕೆ ಐವನ್ ಡಿಸೋಜ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು