8:37 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

3 ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ: ಮೂಡಿಗೆರೆಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

05/02/2023, 16:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ. ಈ ಬಾರಿ ಬಹಳ ತಾಳ್ಮೆಯಿಂದ ಎಲೆಕ್ಷನ್ ಮಾಡ್ಬೇಕು ಅನ್ಕೊಂಡಿದ್ದೀನಿ ಎಂದು ಸಿಡಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ,‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮೂಡಿಗೆರೆ ತಾಲೂಕಿನ ಹಾಂದಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಹೆಬ್ಬಾಳ್ಕರ್, ಸಿಡಿ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಮಾಧ್ಯಮದವರಿಗೆ ವಿನಂತಿ ಕೂಡ ಮಾಡಿದ್ದೇನೆ ಎಂದರು.
ಮೂರು ತಿಂಗಳು ತಾಳ್ಮೆಯಿಂದ ನಾನು ಮಾಡಿದ ಕೆಲಸದಿಂದ ಗೆಲ್ಲಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವನ್ನ ಅಧಿಕಾರಕ್ಕೆ ತರಬೇಕಿದೆ.
ಮಹಿಳೆಯರ ಪರವಾದ ಸರ್ಕಾರವನ್ನ ನಾವು ರೂಪಿಸಬೇಕಿದೆ. ನಾನು ತುಂಬಾ ತಾಳ್ಮೆಯಿಂದ ಇರಲು ಬಯಸುತ್ತೇನೆ ಎಂದು ಅವರು ನುಡಿದರು.
ಕುಮಾರಸ್ವಾಮಿ ಹೇಳಿಕೆ ಬಗ್ಗೆ ನಾನು ನೋಡೂ ಇಲ್ಲ. ಕುಮಾರಸ್ವಾಮಿ ಅಣ್ಣನ ಬಗ್ಗೆ ತುಂಬಾ ಗೌರವ ಇದೆ. ಅವರು ಯಾವ ಮೂಲದಿಂದ ಹೇಳಿದ್ದಾರೆ ಗೊತ್ತಿಲ್ಲ, ಅದಕ್ಕೆ ನಾನು ಪ್ರತಿಕ್ರಿಯೇ ನೀಡೋದು ಸರಿಯಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು